Sunday, August 2, 2026
Sunday, August 2, 2026

JCI Sports and Cultural Club ಬಾಕ್ಸ್ ಕ್ರಿಕೆಟ್ ಟೂರ್ನಿ: ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಚಾಂಪಿಯನ್ಸ್

Date:

JCI Sports and Cultural Club ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ಜೆಸಿಐ ವಲಯ 24ರ ಜೆಎಸಿ ಹಾಗೂ ಜೆಕಾಮ್ ಸಹಯೋಗದಲ್ಲಿ ಆಯೋಜಿಸಿದ್ದ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ 2.0 ಕ್ರೀಡಾಕೂಟದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಗಾಡಿಕೊಪ್ಪದ ಸ್ಪೋರ್ಟ್ಸ್ ಜೋನ್‌ನಲ್ಲಿ ಆಯೋಜಿಸಿದ್ದ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಈ ಬಾರಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯು ಈ ಸಲ ಕಪ್ ನಮ್ದೆ ಎನ್ನುವ ಘೋಷವಾಕ್ಯದೊಂದಿಗೆ ಕಣಕ್ಕಿಳಿದು ಎರಡನೇ ಬಾರಿಯೂ ಕೂಡ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜೆಸಿಐ ಸಂಸ್ಥೆಯಲ್ಲಿ ಇತಿಹಾಸ ಸೃಷ್ಟಿಸಿದೆ.

ಸಹ್ಯಾದ್ರಿ ಸ್ಮ್ಯಾಶರ್ಸ್ ತಂಡದ ನಾಯಕ ಸಂತೋಷ ಕುಮಾರ್ ಉತ್ತಮವಾದ ಪ್ರದರ್ಶನ ನೀಡಿ ಒಟ್ಟು 16 ವಿಕೆಟ್ ಮತ್ತು ಒಟ್ಟು 86 ರನ್ ಹೋಡಿಯುವುದರ ಮೂಲಕ ಹೈಯೆಸ್ಟ್ ವಿಕೆಟ್ ಟೇಕರ್ ಎಂಬ ಪ್ರಶಸ್ತಿ ತಮ್ಮ ಪಾಲಿಗೆ ಪಡೆದುಕೊಂಡಿದ್ದಾರೆ.

ತಂಡದ ಎಲ್ಲ ಆಟಗಾರರಾದ ಈಶ್ವರ್, ನಿತೀನ್, ಸಂತೂ, ಅಭಿಷೇಕ, ಅನುಷ್ ಗೌಡ, ಉಮಾಮಣಿ, ಸಿಂಚನ, ಸಿ.ಕೆ.ವಿಜಯ್ ಕುಮಾರ್, ದಿಗಂತ್ ಮಂಜುನಾಥ್ ಮತ್ತಿತ್ತರು ಉತ್ತಮವಾದ ಪ್ರದರ್ಶನ ನೀಡುವುದರ ಮೂಲಕ ಪ್ರಥಮ ಸ್ಥಾನ ಪಡೆಯಲು ಸಹಕಾರಿಯಾಗಿದೆ. ಸಹ್ಯಾದ್ರಿ ಸ್ಮ್ಯಾಶರ್ಸ್ ತಂಡದ ಮಾಲೀಕ ಸುರೇಂದ್ರ ಕೋಟ್ಯಾನ್ ತಂಡದ ಸಂಪೂರ್ಣ ಜವಾರ್ಬ್ದಾರಿ ಪಡೆದು ಉತ್ತಮವಾದ ಓನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಲಯ 24ರ ಸಹಾಕಾರದೊಂದಿಗೆ ಕ್ರೀಡಾಕೂಟ ಉತ್ತಮ ಯಶಸ್ವಿಯಾಗಿ ಮೂಡಿಬಂದಿದೆ.

JCI Sports and Cultural Club ಡಿಸಿಎಂ ಕೆ.ಎಸ್.ಈಶ್ವರಪ್ಪ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಜೆಸಿಐ ವಲಯ ನಿರ್ದೇಶಕ ಜಿ.ಗಣೇಶ್ ಮತ್ತಿತರರ ಗಣ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...