Monday, April 20, 2026
Monday, April 20, 2026

ಏಪ್ರಿಲ್ 23, ಶ್ರೀಭಗೀರಥ ಜಯಂತಿ ಆಚರಣೆಗೆ ಸಿದ್ಧತೆ, ಮಾಹಿತಿ

Date:

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಪ್ಪಾರ ಸಮಾಜ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಏ.23 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಬಾಗಲಕೋಟೆ ಜಿಲ್ಲೆಯ ಮುದೋಳ್ ತಾಲೂಕಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರರಾದ ನಾಗರಾಜ್ ಶಿರೇಳ್ ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...