ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಜತೆಯಲ್ಲಿ ಹೆಚ್ಚಿನ ಸೇವಾ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಸಹಾಯಕ ಗವರ್ನರ್ ಎಂ.ಬಿ.ಲಕ್ಷಣಗೌಡ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ಅಧಿಕೃತ ಭೇಟಿ ಹಾಗೂ ಕ್ಲಬ್ ಅಸೆಂಬ್ಲಿ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಸ್ಥೆಯ ಸದಸ್ಯರು ಹೆಚ್ಚಿನ ದೇಣಿಗೆ ನೀಡುವ ಮೂಲಕ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯನ್ನು ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂದು ತಿಳಿಸಿದರು.
ವಲಯ ಸೇನಾನಿ ಕಿರಣ್ ಕುಮಾರ್ ಮಾತನಾಡಿ, ಸಂಸ್ಥೆಯು ಹೆಚ್ಚು ಹೆಚ್ಚು ಕೆಲಸ ಮಾಡುವುದರ ಜೊತೆಗೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದೆ. ಈ ಸಂಸ್ಥೆ ಎಲ್ಲಾ ಹಿರಿಯರನ್ನು ಒಳಗೊಂಡಿರುವ ಹಾಗೂ ಇತಿಹಾಸ ಇರುವ ಸಂಸ್ಥೆ ಆಗಿದೆ ಎಂದು ಹೇಳಿದರು.
ವಲಯ ಕಾರ್ಯದರ್ಶಿ ರಾಧಾಕೃಷ್ಣ ಮಾತನಾಡಿ, ಸಂಸ್ಥಯು ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಆಯೋಜಿಸಿ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ನಮ್ಮ ಸಂಸ್ಥೆಯು ಹಲವಾರು ಕಾರ್ಯಕ್ರಮಗಳನ್ನು ಮಾಡುವುದರಲ್ಲಿ ಯಶಸ್ವಿ ಆಗಿದ್ದು, ಇನ್ನೂ ಕೂಡ ಅನೇಕ ಕೆಲಸಗಳನ್ನು ಮಾಡುವುದರ ಜೊತೆಗೆ ರೋಟರಿ ಅಂತರಾಷ್ಟ್ರೀಯ ಫೌಂಡೇಶನ್ಗೆ ಹೆಚ್ಚಿನ ದೇಣಿಗೆ ನೀಡಿ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯನ್ನು ಸದೃಢಗೊಳಿಸಬೇಕೆಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ್ ಮಾತನಾಡಿ, ಸಂಸ್ಥೆಯ ಎಲ್ಲಾ ಸದಸ್ಯರ ಸಹಕಾರದಿಂದ ಉತ್ತಮ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಬಯೋ ಡೈವರ್ಸಿಟಿ ಪಾರ್ಕಿಗೆ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವದ ಪರವಾಗಿ ಸದಸ್ಯರಾದ ಅರುಣ್ ದೀಕ್ಷಿತ್ ಅವರು ನಿರ್ದೇಶಕರಾಗಿ ಆಯ್ಕೆಯಾಗಿದ್ದರಿಂದ ಸಭೆಯಲ್ಲಿ ಸನ್ಮಾನಿಸಲಾಯಿತು.
ಶ್ರೀಕಾಂತ್, ನಿಯೋಜಿತ ವಲಯ ಸೇನಾನಿ ಎ.ಒ.ಮಹೇಶ್, ರವಿಶಂಕರ್, ಗಂಗಪ್ಪ, ಜಗದೀಶ್, ಗಣೇಶ್, ಶ್ರೀನಿವಾಸ್ ಗೌಡ, ಸುರೇಶ್ ಕುಮಾರ್, ಮಧು, ಚಂದ್ರಶೇಖರಯ್ಯ, ಅರುಣ್ ದೀಕ್ಷಿತ್, ರವಿಶಂಕರ್, ಗಿರಿಜಾ ಧನಂಜಯ, ವಿಜಯವಾಣಿ, ವೀಣಾ ಕಿಶೋರ್ ಹಾಗೂ ಇತರ ಸದಸ್ಯರು ಹಾಜರಿದ್ದರು.
