Monday, April 20, 2026
Monday, April 20, 2026

ಸೇವೆ,ಸಾಮಾಜಿಕ ಹೊಣೆ,ಕಲೆ ಸಂಸ್ಕೃತಿಯ ಅರಿವು, ಸಹಭೋಜನ,ಸಹಭಾಗಿತ್ವ .ಎನ್ ಎಸ್ಎಸ್ ಕಲಿಸುವ ಮುಖ್ಯ ಅಭ್ಯಾಸಗಳು- ಎಸ್.ರುದ್ರೇಗೌಡ

Date:

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸಿ ಪರಿಪೂರ್ಣ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ತಿಳಿಸಿದರು.

ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ಏ.17ರಿಂದ 23ರವರೆಗೆ ಹಮ್ಮಿಕೊಂಡಿರುವ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಏ.17ರ ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಓದು, ಬರಹ ಕಲಿಸಿ ಪುಸ್ತಕದ ಜ್ಞಾನ ನೀಡುತ್ತದೆ. ಪಠ್ಯ ಶಿಕ್ಷಣ ಜತೆ ಸಮುದಾಯದ ಪರಿಚಯ, ಸೇವೆ, ಸಾಮಾಜಿಕ ಜವಾಬ್ದಾರಿ, ಕಲೆ, ಸಂಸ್ಕೃತಿಯ ಅರಿವು, ಸಹ ಭೋಜನ, ಸಹಭಾಗಿತ್ವ, ಸೌಹಾರ್ದತೆಯನ್ನು ಎಸ್‌ಎಸ್ ಎಸ್‌ನಿಂದ ಕಲಿಯಬಹುzಯಿಂತಹ ಸಮಗ್ರತೆಯ ಪರಿಕಲ್ಪನೆಯ ಸಾಕಾರಕ್ಕಾಗಿ ನಡೆಯುವ ಎಸ್‌ಎಸ್‌ಎಸ್ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಶಿಕ್ಷಣದ ಮೂಲ ಉದ್ದೇಶವೇ ಸಾಮಾಜಿಕ ಒಳಿತು ಮತ್ತು ಮಾನವೀಯತೆಯ ಬದುಕನ್ನು ಕಟ್ಟಿಕೊಳ್ಳಲು ಅವಶ್ಯವಾದ ಜ್ಞಾನವನ್ನು ನೀಡುವುದಾಗಿದೆ. ಶಿಕ್ಷಣದ ಮೌಲ್ಯಗಳು ಸಾಮಾಜಿಕ ಪರಿವರ್ತನೆಯ ದೊಡ್ಡ ಸಾಧನವಾಗಿವೆ ಎಂದರು.

ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಚೇತನ್ ಗೌಡ ಮಾತನಾಡಿ ಕಲಿಕೆ ವಿದ್ಯಾರ್ಥಿ, ಶಿಕ್ಷಕರ ನಡುವಿನ ಕೊಂಡಿ ಅಷ್ಟೇ ಅಲ್ಲದೆ ಸಮುದಾಯದ ನಡುವೆಯೂ ರಚನಾತ್ಮಕ ಸಂಬAಧ ಏರ್ಪಡಬೇಕು ಎನ್ನುವ ಆಶಯದೊಂದಿಗೆ ಎನ್‌ಎಸ್‌ಎಸ್ ಶಿಬಿರ ನಡೆಸಲಾಗುತ್ತದೆ. ಗ್ರಾಮದ ಸ್ವಚ್ಛತೆ, ಕೆಲಸದ ಜತೆ ಗ್ರಾಮೀಣರಲ್ಲಿ ಆರೋಗ್ಯ ಅರಿವು, ಮೌಢ್ಯತೆ ಹೋಗಲಾಡಿಸುವುದು, ಕಂದಾಚಾರಕ್ಕೆ ವಿರುದ್ಧವಾಗಿ ಯುವಕರ ಪ್ರೇರಣೆ ಹೀಗೆ ಹಲವು ಮಾರ್ಗದಲ್ಲಿ ಯುವ ಜನತೆ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಎ. ರಮೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್. ಅಶಿತ್, ಹೆಚ್.ಬಿ. ರಾಮಣ್ಣ ಹರಳೆಣ್ಣೆ, ಕೆ.ಆರ್. ಸಂಜೀವಪ್ಪ, ರಾಜೇಶ್ವರಿ ತಿಮ್ಮೇಶ್, ಗಿರೀಶ್ ಸ್ವಾಮಿ, ಜಿಪಂ ಮಾಜಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಎಸ್. ನಾಗರಾಜ್, ಕುವೆಂಪು ಕನ್ನಡ ಸಂಘದ ಅಧ್ಯಕ್ಷ ಸತೀಶ್, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಧು ಜಿ., ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಎನ್.ಜೆ. ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು.

ರಮ್ಯಾ ಮತ್ತು ತಂಡ ಪ್ರಾರ್ಥಿಸಿ, ಡಾ. ಮಧು ಜಿ. ಸ್ವಾಗತಿಸಿ, ಪ್ರಶಿಕ್ಷಣಾರ್ಥಿಗಳಾದ ಚಂದನ ಕೆ. ನಿರೂಪಿಸಿ, ಸೃಷ್ಟಿ ವಂದಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...