Wednesday, September 16, 2026
Wednesday, September 16, 2026

Breaking News ಕಚ್ಚಾ ಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ.45 ಜೀವಂತ ಬಾಂಬ್ ಪತ್ತೆ.

Date:

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ ಸಮೀಪದ ಮೀಸಲು ಅರಣ್ಯ ಪ್ರದೇಶದಲ್ಲಿ
ವನ್ಯಜೀವಿ ಶಿಕಾರಿ ನಡೆಸುತ್ತಿದ್ದವರ ವಿರುದ್ಧ ಅರಣ್ಯ ಇಲಾಖೆ ದಾಳಿ ಮಾಡಿದೆ.ಅರಣ್ಯ ಇಲಾಖೆ ಸಿಬ್ಬಂದಿ
ಒಬ್ಬರನ್ನು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಕೋಟೆತಾರಿಗಾದಿಂದ ಹರತಾಳು ಕಡೆಗೆ ಸಾಗುವ ಮುಖ್ಯ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಶಿಕಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ‌ಮೇರೆ ಅರಣ್ಯ ದಾಳಿಮಾಡಲಾಗಿದೆ.

ಕಾರ್ಯಾಚರಣೆಗೆ ಇಳಿದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಕಾಲಿಕ ಕ್ರಮದಿಂದಾಗಿ
ಎಂ. ಡಾಕಪ್ಪ (55), ಕೆ ಹುಣಸವಳ್ಳಿ ಗ್ರಾಮದ ನಿವಾಸಿಯನ್ನು ಬಂಧಿಸಲಾಗಿದೆ.

ಇತರೆ ಆರೋಪಿಗಳಾದ ಭಾಸ್ಕರ (55) ಹಾಗೂ ನಾಗರಾಜ ಗೌಡ (53) ಸ್ಥಳದಿಂದ ಪರಾರಿಯಾಗಿದ್ದಾರೆ

ಈ ಕಾರ್ಯಾಚರಣೆಯ ವೇಳೆ 45 ಜೀವಂತ ಕಚ್ಚಾ ಬಾಂಬ್‌ಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ಜಪ್ತಿಮಾಡಲಾಗಿದೆ.

Breaking News ಈ ದಾಳಿಯಲ್ಲಿ ಹೊಸನಗರ ವಲಯದ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿ ಅನಿಲ್ ಬೆಳ್ಳೆನವರ್, ಹಾಗೂ ಗಸ್ತು ಅರಣ್ಯ ಪಾಲಕರಾದ ಭರತ್ ಕುಮಾರ್, ಮಂಜುನಾಥ ಡಿ., ಪ್ರಶಾಂತ ಜಿ., ಪುಟ್ಟಸ್ವಾಮಿ ಕೆ.ವಿ. ಸೇರಿದಂತೆ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ಪರಾರಿಯಾದ ಆರೋಪಿಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...