Thursday, June 18, 2026
Thursday, June 18, 2026

Bike Accident ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ.

Date:

Bike Accident ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಹೆದ್ದಾರಿಪುರ ಸಮೀಪದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆದ್ದಾರಿಪುರ ಸಮೀಪದ ಜಂಬಳ್ಳಿ ತಿರುವಿನಲ್ಲಿ ನಡೆದಿದೆ. ಜಂಬಳ್ಳಿ ಗ್ರಾಮದ ಕಡೆಯಿಂದ ಬರುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಗರ್ತಿಕೆರೆ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಸಾಗುತ್ತಿದ್ದ ಬಜಾಜ್ ಪಲ್ಸರ್ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಟಿವಿಎಸ್ ಎಕ್ಸೆಲ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಜಂಬಳ್ಳಿ ನಿವಾಸಿ ಸೋಮಶೇಖರ್ ಅವರಿಗೆ ಎಡಗಾಲು ಮುರಿದು ತೀವ್ರ ರಕ್ತಸ್ರಾವವಾಗಿದೆ. ಮತ್ತೊಬ್ಬರಾದ ಸತೀಶ್ ಅವರ ಕಾಲಿಗೂ ಗಂಭೀರವಾಗಿ ಗಾಯವಾಗಿ ಮುರಿತ ಉಂಟಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

Bike Accident ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಇದೇ ವೇಳೆ ಬಜಾಜ್ ಪಲ್ಸರ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಗರ್ತಿಕೆರೆ ನಿವಾಸಿಗಳಾದ ಶ್ರೇಯಸ್ ಹಾಗೂ ಪ್ರಜ್ವಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯ ಮಾಹಿತಿ ತಿಳಿದು ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದು ಬರಬೇಕಿದೆ.

ಈ ಕುರಿತು ಪ್ರಕರಣವನ್ನ ಪೊಲೀಸರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...