Thursday, September 17, 2026
Thursday, September 17, 2026

Basava Jayanti ಅಣ್ಣ.ಬಸವಣ್ಣನವರ ಸಾಮಾಜಿಕ ಕೊಡುಗೆ ನಮಗೆ ಸ್ಫೂರ್ತಿದಾಯಕ- ಹೆಚ್.ಪಿ.ಗಿರೀಶ್.

Date:

Basava Jayanti ನಮ್ಮೂರ ಬಳಗದಿಂದ ವಿಶ್ವಗುರು ಬಸವಣ್ಣ ಜಯಂತಿ ಆಚರಣೆ ಆರೋಗ್ಯ ಶಿಬಿರ
ಸಮ ಸಮಾಜ ನಿರ್ಮಾಣಕ್ಕೆ ವಚನ ಕ್ರಾಂತಿ ಅನಿವಾರ್ಯ- ಹೆಚ್ ಪಿ ಗಿರೀಶ್

ನಮ್ಮೂರ ಬಳಗ ವತಿಯಿಂದ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಮತ್ತು ವಾಸನ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ವಿಶ್ವಗುರು ಸಾಂಸ್ಕೃತಿಕ ನಾಯಕ “ಬಸವ ಜಯಂತಿಯ” ಅಂಗವಾಗಿ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ನಡೆಸುವ ಮುಖಾಂತರ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಿಹಿ ವಿತರಿಸಿ ಆಚರಿಸಲಾಯಿತು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಮ್ಮೂರ ಬಳಗದ ಸಂಚಾಲಕ ಹೆಚ್ ಪಿ ಗಿರೀಶ್ 12ನೇ ಶತಮಾನದಲ್ಲಿಯೇ ಸಮ ಸಮಾಜದ ನಿರ್ಮಾಣಕ್ಕೆ ಅನುಭವ ಮಂಟಪದ ಮೂಲಕ ಸಂವಿಧಾನದ ಪರಿಕಲ್ಪನೆ , ಶಿಕ್ಷಣ, ದಾಸೋಹ ಸೇವೆ ಇಂದಿಗೂ ನಮಗೆಲ್ಲರಿಗೂ ಸ್ಪೂರ್ತಿದಾಯಕ ವಚನ ಬಂಡಾರದ ಮುಖಾಂತರ ವಿಶ್ವ ಗುರು ಬಸವಣ್ಣನವರು ಮೂಡಿಸಿದ ವಚನ ಕ್ರಾಂತಿಯು ಇಡೀ ಪ್ರಪಂಚಕ್ಕೆ ಅತ್ಯವಶ್ಯಕವಾಗಿದೆ ಎಂದರು

Basava Jayanti ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿ.ವಿ.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ನಾಗರಾಜ್ ರಾವ್ ಅವರು ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ, ಮೇಲು-ಕೀಳು ಎಂಬ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಅವಿರತವಾಗಿ ಶ್ರಮಿಸಿದ ಕಾಯಕ ಯೋಗಿ, ಬಸವಣ್ಣನವರ ಕಾರ್ಯ ಹಾಗೂ ಆದರ್ಶಗಳು ನಮಗೆ ಸದಾ ಸ್ಪೂರ್ತಿ. ಅದರಂತೆ ನಮ್ಮೂರ ಬಳಗದಿಂದ ಬಸವೇಶ್ವರ ಜಯಂತಿ ಅಂಗವಾಗಿ ಆರೋಗ್ಯ ಶಿಬಿರ ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್, ಗೌರವ ಸಂಚಾಲಕರುಗಳಾದ ನಾಗರಾಜ್ ಕಂಕಾರಿ, ಸಿ ರವಿ, ಸಂಚಾಲಕರುಗಳಾದ ಕೆ ಆರ್ ಸುರೇಶ್, ರಾಜೇಶ್ ಮಂದಾರ ,ಟಿ ಗುರುಪ್ರಸಾದ್, ಆರ್ ಕಿರಣ್, ಎಂ ರಾಕೇಶ್, ಕೇಬಲ್ ಲೋಕೇಶ್, ರಾಘವೇಂದ್ರ ರಾವ್, ಸುಬ್ರಮಣಿ, ಎಸ್ ಬಸವರಾಜ್,ಮನ್ವಿಕ್ ಜೈನ್, ಎಮ್ ಸುಹಾಸ್, ಜಯಪ್ರಕಾಶ್, ಮುರಳಿ ಸಣ್ಣಕ್ಕಿ, ಕೇಶವಮೂರ್ತಿ, ಶಿ ವಿ ಯೋಗೀಶ್,ಭವಾನಿರಾವ್, ನಂದನ್, ಕೇಶವ ಸಿಗೆಹಟ್ಟಿ, ಸಂದೇಶ್ ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...