Sunday, August 2, 2026
Sunday, August 2, 2026

ಏಪ್ರಿಲ್ 22 .ಸರ್ಕಾರಿ ನಿವೃತ್ತ/ ಕುಟುಂಬ ಪಿಂಚಣಿದಾರರ ಕುಂದುಕೊರತೆ ಆಲಿಸಲು ವಿಡಿಯೊ ಕಾನ್ಫರೆನ್ಸ್

Date:

ಮೈಸೂರು ವಿಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಉಡುಪಿ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಸರ್ಕಾರಿ ನಿವೃತ್ತ/ಕುಟುಂಬ ಪಿಂಚಣಿದಾರರ ಕುಂದುಕೊರತೆಗಳ ನಿವಾರಣೆಗಾಗಿ ಹಾಸನದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಏ.22 ರಂದು ಬೆಳಗ್ಗೆ 11.00ಕ್ಕೆ “ಪಿಂಚಣಿ ಅದಾಲತ್” ಹಾಗೂ ಮಧ್ಯಾಹ್ನ ಜಿಪಿಎಫ್ ಚಂದಾದಾರರ ಕುಂದುಕೊರತೆಗಳ ನಿವಾರಣೆಗಾಗಿ ”ಜಿಪಿಎಫ್ ಅದಾಲತ್” ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಪಿಂಚಣಿದಾರರು ಬೆಳಿಗ್ಗೆ 11 ಗಂಟೆಗೆ ಎ.ಸಿ.ಕಚೇರಿಯ ಕೆ-ಸ್ವಾನ್-ವಿ.ಸಿ. ಸಭಾಂಗಣದಲ್ಲಿ ನಡೆಯುವ ಪಿಂಚಣಿ ಮತ್ತು ಜಿಪಿಎಫ್ ಅದಾಲತ್‌ನಲ್ಲಿ ಭಾಗವಹಿಸಿ ರಾಜ್ಯ ಸೇವಾ ಹಾಗೂ ಕುಟುಂಬ ಪಿಂಚಣಿಗೆ ಸಂಬಂಧಿಸಿದ ತಮ್ಮ ಕುಂದು ಕೊರತೆಗಳನ್ನು ಸಲ್ಲಿಸಬಹುದಾಗಿದೆ. ಅಥವಾ ಶಿವಮೊಗ್ಗ ಜಿಲ್ಲಾ ಖಜಾನೆಯ ಉಪನಿರ್ದೇಶಕರ ಕಚೇರಿಯಲ್ಲಿ ಮುಂಚಿತವಾಗಿ ವಿವರಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಖಜಾನೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...