ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧ, ಸಾರ್ವಜನಿಕ ಸುರಕ್ಷತೆ, ಮಾದಕ ದ್ರವ್ಯ ಸಂಬಂಧಿತ ಅಪರಾಧ, ಕಾನೂನುಬಾಹಿರ ಚಟುವಟಿಕೆ, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಆದ್ಯತೆ ಮೇರೆಗೆ ಮಾಡುವುದು ಇನ್ನೂ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಶಿವಮೊಗ್ಗ ನಗರದ ಸಾಗರ ರಸ್ತೆ, ಆಟೋ ಕಾಂಪ್ಲೆಕ್ಸ್ ಹಾಗೂ ಕಲ್ಲೂರು ಮಂಡ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ ಯೋಜನೆಯ ಭಾಗವಾಗಿರುವ ಶಿವಮೊಗ್ಗ-ಮಾಚೇನಹಳ್ಳಿ ರಸ್ತೆಯ ನಿರ್ಮಾಣ ಸಮಸ್ಯೆಗಳು ಇದ್ದು, ಸಂಚಾರ ದಟ್ಟಣೆ ಮತ್ತು ಸುರಕ್ಷತಾ ಅಪಾಯ
ಶಿವಮೊಗ್ಗದಲ್ಲಿನ ಟ್ರಾಫಿಕ್ ಸಮಸ್ಯೆ ಸರಿಪಡಿಸಲು & ಸೈಬರ್ ಅಪರಾಧ ನಿಯಂತ್ರಿಸಲು ಸಮಾಲೋಚನೆ
