S. N. Channabasappa ಕಳೆದ ವರ್ಷ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಶಿವಮೊಗ್ಗದ ವೀರ ಪುತ್ರ ಶ್ರೀ ಮಂಜುನಾಥ್ ಅವರ ನಿವಾಸಕ್ಕೆ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಹಾಗೂ ಬಿಜೆಪಿ ಮುಖಂಡರು ಭೇಟಿ ನೀಡಿದರು.
ಭೇಟಿಯ ವೇಳೆ ಶಾಸಕರು ಮಂಜುನಾಥ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ, ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು.
ಮಗನ ಶೈಕ್ಷಣಿಕ ಸಾಧನೆಯನ್ನು ಸಂಭ್ರಮಿಸಲು ತೆರಳಿದ್ದ ಸಂದರ್ಭದಲ್ಲಿ ನಡೆದ ಈ ಘಟನೆ ಎಂದಿಗೂ ಮರೆಯಲಾಗದ್ದು ಎಂದು ತಿಳಿಸಿದರು.
S. N. Channabasappa ಭೇಟಿಯ ವೇಳೆ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನವಲೆ ಮಂಜುನಾಥ್, ಶ್ರೀ ದೀನ್ ದಯಾಳ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಶ್ರೀ ಜ್ಞಾನೇಶ್ವರ್, ಪ್ರಮುಖರಾದ ಶ್ರೀ ರವಿಕಿರಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
