Thursday, April 23, 2026
Thursday, April 23, 2026

ಹೊಸನಗರ ಸಾಹಿತ್ಯ ಸಮ್ಮೇಳನಕ್ಕೆ ಪ್ರಭಾಕರ ಕಾರಂತರು ಸರ್ವಾಧ್ಯಕ್ಷರಾಗಿ ಆಯ್ಕೆ

Date:

ಪ್ರಭಾಕರ ಕಾರಂತರೆಂದರೆ ಗಂಭೀರ ಮನಸ್ಸಿನ ,ಆಳ ವಸ್ತುಕಾಳಜಿಗೊಂದು ರೂಪಕದಂತಹ ವ್ಯಕ್ತಿತ್ವ.
ಬರಹಗಳಲ್ಲಿ ಅನನ್ಯ ಜೀವನ ಶ್ರದ್ಧೆ, ಅಪ್ಪಟ ಮಾನುಷ ಮಿಡಿತವುಳ್ಳವರು.
ಅವರ ಸಖ್ಯವೆಂದರೆ ಎತ್ತರದ ಅನುಭವಗಳನ್ನ ನಮ್ಮ ಎದೆಯೊಳಗೆ ಇಡುವಂಥ ಸುಲಭ ಸಾಧ್ಯದ ಸಂವೇದನೆ ನೀಡುವಂಥದ್ದು.
ಕಾರಂತರೀಗ ಹೊಸನಗರ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರ ಕಿರುಪರಿಚಯವನ್ನ ಇನ್ನೋರಗವ ಮಲೆನಾಡಿನ ಪ್ರತಿಭೆ ಬೇಗಾರ್ ನೀಡಿದ್ದಾರೆ..

ತವರು ಮನೆಯನ್ನೂ – ಸೇರಿದ ಮನೆಯನ್ನೂ ಬೆಳಗು ಎಂಬ ಜನಪ್ರಿಯ ನುಡಿಯನ್ನು ಪುರುಷರಿಗೂ ಅನ್ವಯ ಮಾಡಿ ಹೇಳುವುದಾದರೆ ನಮ್ಮ ಹೊಸಕೊಪ್ಪ ದ ಪ್ರಭಾಕರ ಕಾರಂತ್ ರಿಗೆ ತುಂಬಾ ಚನ್ನಾಗಿ ಒಪ್ಪುತ್ತದೆ.

ಏಕೆಂದರೆ ಹೊಸನಗರ ದ ಮುಳುಗಡೆ ಪ್ರದೇಶ ದಿಂದ ಬಂದರೂ ಅವರು ಹೊಸ ಕೊಪ್ಪದ ಹಳೆಯ ಕಾರಂತರು. ಅತ್ತ ಹೊಸನಗರ ದಲ್ಲೂ ಸರ್ವ ಮಾನ್ಯರು.

ತಾನಿರುವ ಜಾಗದಲ್ಲೇ ಅಸ್ಮಿತೆ ಯ ಆವರಿಸಿಕೊಳ್ಳಬಲ್ಲ ಕಾರಂತ್ ರ ಶಕ್ತಿ ಅವರ ಪ್ರೀತಿ ಮತ್ತು ನೀತಿ.
ತನ್ನ ನಿಷ್ಠೆ, ಅಸಾಧಾರಣ ಧೈರ್ಯ, ಮನಸೆಳೆವ ಬರಹ, ಅನನ್ಯ ಜೀವನ ಪ್ರೀತಿ ಮತ್ತು ಸಹೃದಯ ಸಜ್ಜನಿಕೆಯಿಂದ ಸರ್ವರ ಗೌರವ ಕ್ಕೆ ಮತ್ತೊಂದು ರೂಪಕವೇ ಕಾರಂತ್ ಅವರು.

ಇದೀಗ ಅಂದರೆ 2026 ರ ಏಪ್ರಿಲ್ 24 ರಂದು ಹೊಸನಗರ ದಲ್ಲಿ ನಡೆವ ಸಾಹಿತ್ಯ ಸಮ್ಮೇಳನ ದ ಸರ್ವಾಧ್ಯಕ್ಷ ರಾಗಿರುವುದು ಅವರ ಸಂಸರ್ಗ ದ ನಮ್ಮೆಲ್ಲರಿಗೂ ಅತೀವ ಹೆಮ್ಮೆ ಮತ್ತು ಸಂತೋಷದ ಸಂಗತಿ.

ಅಂದ ಹಾಗೇ ಈ ಸಮ್ಮೇಳನದಲ್ಲಿ ಕಾರಂತ ರ ಬದುಕು – ಬರಹದ ಬಗ್ಗೆ ಮಾತಾಡುವ ಸದವಕಾಶ ನನಗೇ ಸಿಕ್ಕಿರುವುದು ಖುಷಿ ಯ ಇಮ್ಮಡಿಯಾಗಿದೆ

ಬರಹ: ರಮೇಶ್ ಬೇಗಾರ್
ಚಲನಚಿತ್ರ ನಿರ್ದೇಶಕರು.. ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Hostel Association ಮೊಬೈಲ್, ಟೀವಿಗೆ ದಾಸರಾಗಿರುವ ಮಕ್ಕಳನ್ನು ಹೊರತರುವುದು ಕಷ್ಟ- ಸತೀಶ್ ಕುಮಾರ್

Youth Hostel Association ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಬೇಸಿಗೆ ಶಿಬಿರ...

Canara Bank Rural Self Employment Training Institute ಅಣಬೆ ಬೇಸಾಯ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನ

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ...

University of Mysore ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ...