Wednesday, September 16, 2026
Wednesday, September 16, 2026

SN Channabasappa ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು.ಶಿಸ್ತು ಮತ್ತು ಸೇವಾ ಮನೋಭಾವನೆ ಮೈಗೂಡಿಸಿಕೊಳ್ಳಬೇಕು- ಶಾಸಕ ಚನ್ನಿ.

Date:

SN Channabasappa “ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು, ಶಿಸ್ತು ಮತ್ತು ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಂಡು ಸಮಾಜದ ಆಸ್ತಿಯಾಗಬೇಕು,” ಎಂದು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಕರೆ ನೀಡಿದರು.

ನಗರದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಆವರಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ನೀಡುವ ಇಂತಹ ವೇದಿಕೆಗಳು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸಹಕಾರಿ. ದೇಶದ ರಕ್ಷಣೆ ಮತ್ತು ಸೇವೆಯಲ್ಲಿ ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಘಟಕಗಳ ಪಾತ್ರ ಮಹತ್ತರವಾದುದು ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...