ಶಿವಮೊಗ್ಗ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಕಾನೂನು ಉಲ್ಲಂಘಿಸುವ ಮಾಲೀಕರಿಗೆ ಭಾರೀ ದಂಡ ಹಾಗೂ ಜೈಲು ಶಿಕ್ಷೆಯ ಎಚ್ಚರಿಕೆ ನೀಡಲಾಗಿದೆ.
ಪ್ರಮುಖ ನಿರ್ಬಂಧಗಳು:
14 ವರ್ಷದೊಳಗಿನ ಮಕ್ಕಳು: ಯಾವುದೇ ಅಂಗಡಿ, ವಾಣಿಜ್ಯ ಸಂಸ್ಥೆಗಳು ಅಥವಾ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.
ಕಿಶೋರ ಕಾರ್ಮಿಕರು (14-18 ವರ್ಷ): 18 ವರ್ಷದೊಳಗಿನ ಕಿಶೋರಾವಸ್ಥೆಯ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಕಾನೂನು ಕ್ರಮ ಮತ್ತು ದಂಡ:
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ 2016ರ ತಿದ್ದುಪಡಿ ಕಾಯ್ದೆಯಡಿ ನಿಯಮ ಉಲ್ಲಂಘಿಸುವ ಮಾಲೀಕರ ಮೇಲೆ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಲಾಗುವುದು:
ತಪ್ಪಿತಸ್ಥ ಮಾಲೀಕರಿಗೆ ₹50,000 ವರೆಗೆ ದಂಡ ವಿಧಿಸಲಾಗುವುದು. ಅಪರಾಧದ ತೀವ್ರತೆಯ ಆಧಾರದ ಮೇಲೆ ಎರಡು ವರ್ಷದವರೆಗೆ ಕಾರಾಗೃಹ ವಾಸದ ಶಿಕ್ಷೆ ವಿಧಿಸಲು ಅವಕಾಶವಿದೆ. ಹಾಗೂ ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯಲ್ಲಿ ಎಫ್ಐಆರ್ ದಾಖಲಿಸಲಾಗುವುದು.
ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲಕಾರ್ಮಿಕರು ಅಥವಾ ಅಪಾಯಕಾರಿ ಕೆಲಸಗಳಲ್ಲಿ ತೊಡಗಿರುವ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಕಾರ್ಮಿಕ ಇಲಾಖೆ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಥವಾ ಪೊಲೀಸ್ ಇಲಾಖೆ
ಮಕ್ಕಳ ಸಹಾಯವಾಣಿ ಸಂಖ್ಯೆ: 1098
ಅಲ್ಲದೆ, ಸಾರ್ವಜನಿಕರು ಆನ್ಲೈನ್ ಮೂಲಕವೂ ದೂರು ದಾಖಲಿಸಲು ಅವಕಾಶವಿದ್ದು, ತಕ್ಷಣವೇ www.pencil.gov.in ಪೋರ್ಟಲ್ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ವೇಣುಗೋಪಾಲ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಕಾನೂನು ಉಲ್ಲಂಘಿಸುವ ಮಾಲೀಕರಿಗೆ ಭಾರೀ ದಂಡ ಹಾಗೂ ಜೈಲು ಶಿಕ್ಷೆಯ ಎಚ್ಚರಿಕೆ ನೀಡಲಾಗಿದೆ.
ಪ್ರಮುಖ ನಿರ್ಬಂಧಗಳು:
14 ವರ್ಷದೊಳಗಿನ ಮಕ್ಕಳು: ಯಾವುದೇ ಅಂಗಡಿ, ವಾಣಿಜ್ಯ ಸಂಸ್ಥೆಗಳು ಅಥವಾ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.
ಕಿಶೋರ ಕಾರ್ಮಿಕರು (14-18 ವರ್ಷ): 18 ವರ್ಷದೊಳಗಿನ ಕಿಶೋರಾವಸ್ಥೆಯ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಕಾನೂನು ಕ್ರಮ ಮತ್ತು ದಂಡ:
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ 2016ರ ತಿದ್ದುಪಡಿ ಕಾಯ್ದೆಯಡಿ ನಿಯಮ ಉಲ್ಲಂಘಿಸುವ ಮಾಲೀಕರ ಮೇಲೆ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಲಾಗುವುದು:
ತಪ್ಪಿತಸ್ಥ ಮಾಲೀಕರಿಗೆ ₹50,000 ವರೆಗೆ ದಂಡ ವಿಧಿಸಲಾಗುವುದು. ಅಪರಾಧದ ತೀವ್ರತೆಯ ಆಧಾರದ ಮೇಲೆ ಎರಡು ವರ್ಷದವರೆಗೆ ಕಾರಾಗೃಹ ವಾಸದ ಶಿಕ್ಷೆ ವಿಧಿಸಲು ಅವಕಾಶವಿದೆ. ಹಾಗೂ ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯಲ್ಲಿ ಎಫ್ಐಆರ್ ದಾಖಲಿಸಲಾಗುವುದು.
ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲಕಾರ್ಮಿಕರು ಅಥವಾ ಅಪಾಯಕಾರಿ ಕೆಲಸಗಳಲ್ಲಿ ತೊಡಗಿರುವ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಕಾರ್ಮಿಕ ಇಲಾಖೆ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಥವಾ ಪೊಲೀಸ್ ಇಲಾಖೆ
ಮಕ್ಕಳ ಸಹಾಯವಾಣಿ ಸಂಖ್ಯೆ: 1098
ಅಲ್ಲದೆ, ಸಾರ್ವಜನಿಕರು ಆನ್ಲೈನ್ ಮೂಲಕವೂ ದೂರು ದಾಖಲಿಸಲು ಅವಕಾಶವಿದ್ದು, ತಕ್ಷಣವೇ www.pencil.gov.in ಪೋರ್ಟಲ್ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ವೇಣುಗೋಪಾಲ್ ತಿಳಿಸಿದ್ದಾರೆ.
