ಭಾವಸಾರ ವಿಷನ್ ಪ್ರೇರಣಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ರೋಟರಿ ಶಿವಮೊಗ್ಗದ ಸ್ಥಾಪಕ, ಫ್ರೆಂಡ್ಸ್ ಸೆಂಟರ್ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ, ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಎಂ.ಎನ್.ವೆಂಕಟೇಶ ರವರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇಂದು ಎಂ.ಎನ್.ವೆಂಕಟೇಶ ರವರು ಜೆಪಿಎನ್ ರಸ್ತೆಯಲ್ಲಿನ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ 80ನೇ ಬಾರಿ ರಕ್ತದಾನ ಮಾಡಿ ಮಾನವೀಯತೆಯನ್ನು ಮೆರೆದಿದ್ದಾರೆ. ನಿರಂತರವಾಗಿ ರಕ್ತದಾನ ಮಾಡುತ್ತಾ ಹಾಗೂ ರಕ್ತದಾನದ ಬಗ್ಗೆ ಸ್ನೇಹಿತರಿಗೆ ಬಂಧುಗಳಿಗೆ ಜಾಗೃತಿ ಮಾಡಿಸಿ ಅವರಿಗೂ ರಕ್ತದಾನ ಮಾಡಲು ಪ್ರೇರೇಪಿಸುತ್ತಿರುವ ಎಂ.ಎನ್.ವೆಂಕಟೇಶ ರವರು ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ 120 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಧರಣೇಂದ್ರ ದಿನಕರ ಉಪಸ್ಥಿತರಿದ್ದರು.
