Tuesday, April 28, 2026
Tuesday, April 28, 2026

ಭದ್ರಾವತಿ ತಾಲ್ಲೂಕು ಮಲ್ಲಿಗೇನಹಳ್ಳಿಯಲ್ಲಿ ಸುರಿದ ಮಳೆ: ರೈತ ರಂಗಧಾಮಯ್ಯ ಅಡಿಕೆ ತೋಟಕ್ಕೆ ಅಪಾರ ಹಾನಿ

Date:

ಭದ್ರಾವತಿ ತಾಲ್ಲೂಕಿನ ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯ ಪರಿಣಾಮವಾಗಿ ಅಡಿಕೆ ತೋಟಕ್ಕೆ ಭಾರೀ ಹಾನಿಯಾಗಿದೆ. ಗ್ರಾಮದ ರೈತ ಕೆ. ರಂಗಧಾಮಯ್ಯ ಅವರಿಗೆ ಸೇರಿದ ತೋಟದಲ್ಲಿ ಸುಮಾರು 400ಕ್ಕೂ ಹೆಚ್ಚು ಅಡಿಕೆ ಮರಗಳು ಬೇರುಸಹಿತ ನೆಲಕ್ಕುರುಳಿವೆ.
ಬಿರುಗಾಳಿಯ ಹೊಡೆತಕ್ಕೆ ತತ್ತರಿಸಿದ ಅಡಿಕೆ ಮರಗಳು, ಮಳೆ ನೀರಿನಿಂದ ಮಣ್ಣು ಮೃದುವಾಗಿರುವ ಕಾರಣ ಬೇರು ಹಿಡಿತ ಕಳೆದುಕೊಂಡು ಉರುಳಿವೆ. ಹಲವು ಮರಗಳಲ್ಲಿ ಫಸಲು ಇದ್ದದ್ದರಿಂದ ರೈತನಿಗೆ ನೇರ ಆರ್ಥಿಕ ನಷ್ಟ ಉಂಟಾಗಿದೆ. ಒಂದು ವರ್ಷದ ಆದಾಯದ ಪ್ರಮುಖ ಮೂಲವಾಗಿದ್ದ ಅಡಿಕೆ ಬೆಳೆ ಹಾನಿಗೊಳಗಾಗಿರುವುದರಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಸ್ಥಳೀಯರು ತಿಳಿಸಿದಂತೆ, ಸುರಿದ ಭಾರಿ ಮಳೆ ಹಾಗೂ ಗಾಳಿ ವೇಗ ಹೆಚ್ಚಿರುವುದರಿಂದ ಈ ರೀತಿಯ ಹಾನಿ ಸಂಭವಿಸಿದ್ದು, ಇಡೀ ತೋಟವೇ ಹಾನಿಯಾಗಿದೆ.
ರೈತ ರಂಗಧಾಮಯ್ಯ ಅವರು ಸರ್ಕಾರದಿಂದ ತುರ್ತು ಪರಿಹಾರ ನೀಡುವಂತೆ ಮನವಿ ಮಾಡಿಕೊಂಡಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿ, ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಶಿವಮೊಗ್ಗದಲ್ಲಿ ಜೇಸೀಸ್ ಆಶ್ರಯದಲ್ಲಿ ಆ್ಯಕ್ಷನ್ ಫ್ರೇಮ್ ವರ್ಕ್ ಟ್ರೈನಿಂಗ್

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನ ಮತ್ತು ಜೆಸಿಐ...

Rotary Shivamogga ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು- ಕೆ.ಫಾಲಾಕ್ಷ

Rotary Shivamogga ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು...

Kuvempu University ಕುವೆಂಪು ವಿವಿ, ಸಮಾಜಕಾರ್ಯ ವಿಭಾಗದಿಂದ ಪ್ರಶಿಕ್ಷಣ ಶಿಬಿರ

Kuvempu University ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಕೋಮಾರನಹಳ್ಳಿ ಗ್ರಾಮ...