Tuesday, April 28, 2026
Tuesday, April 28, 2026

ಕೆಎಸ್ಸಿಎ ಅಕಾಡೆಮಿ ಸಮರ್ ಕ್ಯಾಂಪ್ ಉದ್ಘಾಟನೆ

Date:

ಶಿವಮೊಗ್ಗದ KSCA ನವುಲೆ ಸ್ಟೇಡಿಯಂನಲ್ಲಿ ನಡೆದ KSCA ಅಕಾಡೆಮಿ ಸಮರ್ ಕ್ಯಾಂಪ್ ಉದ್ಘಾಟನಾ ಸಮಾರಂಭ ನಡೆಯಿತು.
ಈ ಕಾರ್ಯಕ್ರಮವನ್ನು ಶ್ರೀ ನಿಖಿಲ್ ಬಿ., ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಉದ್ಘಾಟಿಸಿದರು. ಅವರ ಗೌರವಾನ್ವಿತ ಉಪಸ್ಥಿತಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಈ ಸಮಾರಂಭದಲ್ಲಿ ಶ್ರೀ ಅವಿನಾಶ್ ವೈದ್ಯ, ಶ್ರೀ ಆರ್. ಪಿ. ನಾಗರಾಜ್, ಮಾಜಿ ವಲಯ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕಾಮತ್ ಎನ್., ಶ್ರೀ ಎಸ್. ಎಸ್. ಸುಕುಮಾರ್ ಪಟೇಲ್, ಮಾಜಿ ವಲಯ ಸಂಚಾಲಕರಾದ ಡಿ. ಆರ್ . ನಾಗರಾಜ್, ಶ್ರೀ ಸದಾನಂದ ಹೆಚ್.ಎಸ್., ಹಾಗೂ KSCA ಪದಾಧಿಕಾರಿಗಳು, ತರಬೇತುದಾರರು, ಪೋಷಕರು, ಕ್ಲಬ್ ಕಾರ್ಯದರ್ಶಿಗಳು, ಜೀವಮಾನ ಸದಸ್ಯರು, ಆಟಗಾರರು ಮತ್ತು ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಗಿ, ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟನೆ ನೆರವೇರಿತು. ನಂತರ ಹಸಿರು ಅಭಿಯಾನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಂಡರ್-14 ಬಾಲಕರು, ಅಂಡರ್-16 ಬಾಲಕರು, ಅಂಡರ್-19 ಬಾಲಕರು, ಅಂಡರ್-15 ಬಾಲಕಿಯರು ಹಾಗೂ ಅಂಡರ್-19 ಮಹಿಳಾ ವಿಭಾಗಗಳ ಸಮರ್ ಕ್ಯಾಂಪ್‌ಗಳಿಗೆ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...

JCI Shivamogga ಶಿವಮೊಗ್ಗದಲ್ಲಿ ಜೇಸೀಸ್ ಆಶ್ರಯದಲ್ಲಿ ಆ್ಯಕ್ಷನ್ ಫ್ರೇಮ್ ವರ್ಕ್ ಟ್ರೈನಿಂಗ್

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನ ಮತ್ತು ಜೆಸಿಐ...

Rotary Shivamogga ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು- ಕೆ.ಫಾಲಾಕ್ಷ

Rotary Shivamogga ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು...