B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ – ಬಿನಾ ಸಹಕಾರ್ ನಹೀ ಉದ್ಧಾರ್” ಎಂಬ ಧ್ಯೇಯವಾಕ್ಯದೊಂದಿಗೆ, ಸಹಕಾರ ಭಾರತಿ ಶಿಕಾರಿಪುರ ತಾಲ್ಲೂಕು ವತಿಯಿಂದ ಆಯೋಜಿಸಲಾಗಿದ್ದ ‘ತಾಲ್ಲೂಕು ಅಭ್ಯಾಸ ವರ್ಗ’ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಶಿಕಾರಿಪುರದ ಕುಮುದ್ವತಿ ಆಡಿಟೋರಿಯಂನಲ್ಲಿ ಉದ್ಘಾಟಿಸಿದರು.
B.Y. Raghavendra ಸಹಕಾರ ಕ್ಷೇತ್ರವು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಸ್ಕೃತಿ ಮತ್ತು ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ನೀಡುವುದು ಅತ್ಯಗತ್ಯ. ಈ ಅಭ್ಯಾಸ ವರ್ಗವು ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ತಮ್ಮ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಅರಿಯಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ರಾಘವೇಂದ್ರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಡಿಸಿದರು.
