ಶಿವಮೊಗ್ಗ ಜಿಲ್ಲೆಯ ಎಲ್ಲಾ 5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಮಾಡುವುದು ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆ. 30 ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದ್ದು, ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ. ಇದರಿಂದ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿಧ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ. ಪೋಷಕರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಯನ್ನು ಸಕಾಲದಲ್ಲಿ ತಲುಪಿಸುವಲ್ಲಿ ಸಹಕರಿಸುವಂತೆ ಅವರು ತಿಳಿಸಿದ್ದಾರೆ.
ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ಕಡ್ಡಾಯ- ವಿ.ಅಭಿಷೇಕ್
Date:
