ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಗರ್ಭಿಣಿ ಸಾವನ್ನಪ್ಪಿರುವ ಘಟನೆ ನಡೆದಿದೆ.
26 ವರ್ಷದ ಸ್ವಾತಿ ಎಂಬ ಗರ್ಭಿಣಿ ಶುಂಠಿ ಗದ್ದೆಯಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ.
ತಕ್ಷಣ ಆಸ್ಪತ್ರೆಗೆ ರವಾನೆ ಮಾಡಿದರೂ ಪ್ರಯೋಜನವಾಗಿಲ್ಲ.. ಆನಂದಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
