Wednesday, May 6, 2026
Wednesday, May 6, 2026

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Date:

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ತೀವ್ರವಾದ ಶಾಖದ ಹೊಡೆತದಿಂದ (ಹೀಟ್ ವೇವ್) ಜಾನುವಾರುಗಳ ಆರೋಗ್ಯ ಮತ್ತು ಹಾಲಿನ ಉತ್ಪಾದನೆಯ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಅವರು ಪಶುಪಾಲಕರಿಗೆ ಕೆಲವು ಸರಳ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ಕೋರಿದ್ದಾರೆ.
ಮಧ್ಯಾಹ್ನದ ರಕ್ಷಣೆ: ಕಡು ಬಿಸಿಲಿರುವ ಮಧ್ಯಾಹ್ನದ ಸಮಯದಲ್ಲಿ ಜಾನುವಾರುಗಳಿಗೆ ಒದ್ದೆಯಾದ ಗೋಣಿ ಚೀಲಗಳನ್ನು ಹೊದಿಸುವುದು ಉತ್ತಮ.
Summer ಕೊಟ್ಟಿಗೆಯ ನಿರ್ವಹಣೆ: ಜಾನುವಾರುಗಳ ಕೊಟ್ಟಿಗೆಯ ಮೇಲ್ಛಾವಣಿಗೆ ಸುಣ್ಣದ ಲೇಪನ ಮಾಡುವುದರಿಂದ ಅಥವಾ ತೆಂಗಿನ ಗರಿಗಳನ್ನು ಹೊದಿಸುವುದರಿಂದ ತಾಪಮಾನವನ್ನು ಕಡಿಮೆ ಮಾಡಬಹುದು.
ನೀರಿನ ಲಭ್ಯತೆ: ಜಾನುವಾರುಗಳಿಗೆ ಯಾವಾಗಲೂ ಕುಡಿಯಲು ಸ್ವಚ್ಛ ಮತ್ತು ತಂಪಾದ ನೀರಿನ ವ್ಯವಸ್ಥೆ ಇರಲಿ.
ದೇಹ ತಂಪಾಗಿಸುವುದು: ಜಾನುವಾರುಗಳ ಮೈಮೇಲೆ ನೀರನ್ನು ಸಿಂಪಡಿಸುವ ವ್ಯವಸ್ಥೆ ಮಾಡಬೇಕು ಹಾಗೂ ಸೊಳ್ಳೆ/ಕೀಟಗಳ ಬಾಧೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.
ಪೌಷ್ಟಿಕ ಆಹಾರ: ಜಾನುವಾರುಗಳಿಗೆ ರಸಮೇವು, ಪೌಷ್ಟಿಕ ಆಹಾರ ಮತ್ತು ಅಗತ್ಯ ಪೋಷಕಾಂಶಗಳ ಪೂರಕಗಳನ್ನು ನೀಡಬೇಕು.
ನೆರಳಿನ ವ್ಯವಸ್ಥೆ: ಸಾಧ್ಯವಾದಷ್ಟು ಮಧ್ಯಾಹ್ನದ ವೇಳೆ ಜಾನುವಾರುಗಳನ್ನು ಬಿಸಿಲಿಗೆ ಬಿಡದೆ, ಮರಗಳ ಕೆಳಗೆ ತಂಪಾದ ನೆರಳಿನಲ್ಲಿ ಇರುವಂತೆ ನೋಡಿಕೊಳ್ಳಬೇಕು.
ರೈತರು ಈ ಮೇಲಿನ ಕ್ರಮಗಳನ್ನು ಪಾಲಿಸುವ ಮೂಲಕ ಬೇಸಿಗೆಯ ಅವಧಿಯಲ್ಲಿ ತಮ್ಮ ಜಾನುವಾರುಗಳ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Sri Sri Prasannanatha Swamiji ಪ್ರವಾಸ ಮತ್ತು ಕ್ರೀಡಾಚಟುವಟಿಕೆಗಳಿಂದ ಜೀವನೋತ್ಸಾಹ ವೃದ್ಧಿ- ಶ್ರೀಪ್ರಸನ್ನನಾಥಶ್ರೀ

Sri Sri Prasannanatha Swamiji ಪ್ರವಾಸ ಮಾಡುವುದರಿಂದ ಹೊಸ ಪ್ರಾಕೃತ್ತಿನ ಸಂಪತ್ತಿನ ಪರಿಚಯ...