Wednesday, May 6, 2026
Wednesday, May 6, 2026

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Date:

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ ಸಾಧಕರಿಗೆ ಗೌರವ ಡಾಕ್ಟರೇಟ್ (ಡಿ.ಲಿಟ್) ಪದವಿ ನೀಡಿ ಗೌರವಿಸಿದರು.
ಸಾಮಾಜಿಕ ಹೋರಾಟಗಾರ ಕೋಣಂದೂರು ಲಿಂಗಪ್ಪ, ಖ್ಯಾತ ರಂಗಕರ್ಮಿ ಕೆ.ವಿ. ಅಕ್ಷರ ಮತ್ತು ಶಿಕ್ಷಣ ತಜ್ಞ ಪ್ರೊ. ಎಚ್.ಎ. ರಂಗನಾಥ್‌ ಅವರು ಈ ಸಾಲಿನ ಗೌರವಕ್ಕೆ ಭಾಜನರಾಗಿದ್ದಾರೆ. ಈ ಕುರಿತು ರಾಜ್ಯಪಾಲರಿಂದ ಅಧಿಕೃತ ಅನುಮೋದನೆ ದೊರೆತಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಸಾಧಕರ ಕಿರು ಪರಿಚಯ:

  1. ಕೋಣಂದೂರು ಲಿಂಗಪ್ಪ (ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರ):
    ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನವರಾದ ಲಿಂಗಪ್ಪನವರು ಹಿರಿಯ ಸಮಾಜವಾದಿ ನಾಯಕರಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿ ಚಿರಪರಿಚಿತರು.
    ರಾಜಕೀಯ ಸೇವೆ: 1972 ರಿಂದ 1979ರವರೆಗೆ ವಿಧಾನಸಭೆ ಸದಸ್ಯರಾಗಿ ಹಾಗೂ ನಂತರ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. “ಉಳುವವನೇ ಹೊಲದೊಡೆಯ” ಹೋರಾಟ ಮತ್ತು ಹಾವನೂರು ವರದಿ ಅನುಷ್ಠಾನದಲ್ಲಿ ಇವರ ಪಾತ್ರ ಪ್ರಮುಖವಾದುದು.
    ಸಾಹಿತ್ಯ ಸೇವೆ: ‘ದೀಪ ಹಚ್ಚಿರೋ’ ಕವನ ಸಂಕಲನ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ ಹಾಗೂ ದೇವರಾಜ ಅರಸು ಪ್ರಶಸ್ತಿಗಳು ಲಭಿಸಿವೆ.
  2. ಡಾ. ಕೆ.ವಿ. ಅಕ್ಷರ (ರಂಗಭೂಮಿ ಕ್ಷೇತ್ರ):
    ಹೆಗ್ಗೊಡಿನ ನೀನಾಸಂ ಸಂಸ್ಥೆಯ ಮೂಲಕ ರಂಗಭೂಮಿಗೆ ಅಂತಾರಾಷ್ಟ್ರೀಯ ಮನ್ನಣೆ ತಂದುಕೊಟ್ಟ ಕೆ.ವಿ. ಸುಬ್ಬಣ್ಣನವರ ಪುತ್ರರಾದ ಅಕ್ಷರ ಅವರು, ಕಳೆದ ನಾಲ್ಕು ದಶಕಗಳಿಂದ ರಂಗಭೂಮಿಯ ಕಾಯಕದಲ್ಲಿ ತೊಡಗಿದ್ದಾರೆ.
    ಶಿಕ್ಷಣ: ದೆಹಲಿಯ ಎನ್.ಎಸ್.ಡಿ ಹಾಗೂ ಲೀಡ್ಸ್ ವಿಶ್ವವಿದ್ಯಾಲಯದಲ್ಲಿ ರಂಗಕಲೆಯ ಉನ್ನತ ಶಿಕ್ಷಣ ಪಡೆದಿದ್ದಾರೆ.
    ಸಾಧನೆ: 70ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿರುವ ಇವರು, ‘ಸೇತುಬಂಧನ’, ‘ಚೂರಿಕಟ್ಟೆ’ಯಂತಹ ಪ್ರಸಿದ್ಧ ನಾಟಕಗಳನ್ನು ರಚಿಸಿದ್ದಾರೆ. ಅನುವಾದಕ ಮತ್ತು ಪ್ರಕಾಶಕರಾಗಿಯೂ ಇವರ ಕೊಡುಗೆ ಅಪಾರ.
  3. ಪ್ರೊ. ಎಚ್.ಎ. ರಂಗನಾಥ್ (ಶಿಕ್ಷಣ ಕ್ಷೇತ್ರ):
    ತಳಿಶಾಸ್ತ್ರ (Genetics) ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಪ್ರಾಧ್ಯಾಪಕರಾಗಿರುವ ಇವರು ಬೆಂಗಳೂರು ವಿವಿ ಕುಲಪತಿಯಾಗಿ ಹಾಗೂ ನ್ಯಾಕ್ (NAAC) ನಿರ್ದೇಶಕರಾಗಿ ಮಹತ್ವದ ಸುಧಾರಣೆ ತಂದವರು.
    ಸಂಶೋಧನೆ: ಮೈಸೂರು ವಿಶ್ವವಿದ್ಯಾಲಯದಲ್ಲಿ ‘ಡ್ರೊಸೊಫಿಲಾ ಸ್ಟಾಕ್ ಸೆಂಟರ್’ ಸ್ಥಾಪಿಸಿದ ಇವರು, 102ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.
    ಗೌರವಗಳು: ಸರ್ ಎಂ. ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ ಮತ್ತು ಸುಂದರ್ ಲಾಲ್ ಹೋರಾ ಪದಕ ಸೇರಿದಂತೆ ದೇಶದ ಪ್ರಮುಖ Kuvempu university ವಿಜ್ಞಾನ ಅಕಾಡೆಮಿಗಳ ಫೆಲೋ ಗೌರವ ಇವರಿಗಿದೆ ಎಂದರು.
    ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ವಿಶ್ವವಿದ್ಯಾಲಯದ ವರದಿ ವಾಚಿಸಿದರು.
    ಕುಲಸಚಿವರಾದ ಹೇಮಂತ್ ಎನ್. ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ. ಆರ್. ತಿಮ್ಮರಾಯಪ್ಪ ಇತರೆ ಅಧಿಕಾರಿಗಳು, , ಗೌರವ ಡಾಕ್ಟರೇಟ್ ಪುರಸ್ಕೃತರು, ಪದವೀಧರರು
    ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...