Monday, May 11, 2026
Monday, May 11, 2026

ಕ್ರೀಡೆಗಳಿಂದ ಮಾನಸಿಕ ಖಿನ್ನತೆ ದೂರ- ಕೆ.ಎಸ್.ತಾರಾನಾಥ್

Date:

ಕ್ರೀಡೆಗಳಿಂದ ಆತ್ಮಸ್ಥೈರ್ಯ ಹಾಗೂ ಜೀವನೋತ್ಸಾಹ ಮೂಡುತ್ತದೆ ಎಂದು ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಕೆ ಎಸ್ ತಾರಾನಾಥ್ ಅಭಿಮತ ವ್ಯಕ್ತಪಡಿಸಿದರು. ಅವರು ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಂಭ್ರಮದ ಆಚರಣೆ ಅಂಗವಾಗಿ ಬಸವೇಶ್ವರ ಕಾಲೇಜಿನ ಆವರಣದಲ್ಲಿ ಸಂಘದ ಸದಸ್ಯ ಮಹಿಳೆಯರಿಗೆ ಆಯೋಜಿಸಲಾದ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಒತ್ತಡದ ಪ್ರಪಂಚದಲ್ಲಿ ಇಂದು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ತುಂಬಾ ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಹಾಗೆ ಇಂತಹ ಕ್ರೀಡೆಗಳಿಂದ ಪರಸ್ಪರರಲ್ಲಿ ಒಡನಾಟ ಹೆಚ್ಚುತ್ತದೆ ಜೊತೆಗೆ ಪರಿಚಯವೂ ಸಹ ಆಗುತ್ತದೆ ಇದರಿಂದ ಮಾನಸಿಕ ಖಿನ್ನತೆ ದೂರವಾಗುತ್ತದೆ ಆದ್ದರಿಂದ ಎಲ್ಲಾ ಸದಸ್ಯರು ಇಂತಹ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ನುಡಿದರು. ಕಾರ್ಯಕ್ರಮದ ಸಂಚಾಲಕರು ಹಾಗೂ ನಿರ್ದೇಶಕರಗಳಾದ ಶ್ರೀಮತಿ ಶಾಂತ ಆನಂದ್ ಹಾಗೂ ಅನಿತಾ ರವಿಶಂಕರ್ ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿ ಮಹಿಳೆಯರಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶಗಳನ್ನು ಕಲ್ಪಿಸಿದರು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಕಾಯಕಯೋಗಿ ಬಿ ಚನ್ನಬಸಪ್ಪ ಎಂ ಆರ್ ಪ್ರಕಾಶ್ ಎಚ್‌ವಿ ಮರುಳೆ ಶ. ಎಚ್ ಎಮ್ ಶಿವಾನಂದ್ ಕೆ ಸಿ ಪಾಲಾಕ್ಷಪ್ಪ. ಬಸವರಾಜ್ ಎಸ್ ಪಿ ಶಶಿಧರ್ ಚೆನ್ನೇಶ್ ಸಮಾಜ ಪ್ರಮುಖರಾದ ಪಿ ರುದ್ರೇಶ್
ಜಿ ವಿಜಯಕುಮಾರ್. . ಕಾರ್ಯದರ್ಶಿ ಎಸ್ ಸದಾಶಿವಮೂರ್ತಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಕವಿ ಜಿಎಸ್ಎಸ್ ಕನ್ನಡದ ಸಾಂಸ್ಕೃತಿಕ ಪ್ರಜ್ಞೆ, ರಾಯಭಾರಿ- ಡಾ.ಕಿರಣ್ ದೇಸಾಯಿ

Karnataka Sanga ಕನ್ನಡ ಕಾವ್ಯ ಪರಂಪರೆಯಲ್ಲಿ ಕವಿಗೆ ಸಮಾನ ಹೃದಯವುಳ್ಳವರೆಲ್ಲರೂ ಸಹೃದಯರು...