Wednesday, May 13, 2026
Wednesday, May 13, 2026

ನೀಟ್-ಯುಜಿ ಪರೀಕ್ಷೆ ರದ್ದು – ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಸ್ಪರ್ಧಾತ್ಮಕ ಪರೀಕ್ಷೆಗಳ ಮೌಲ್ಯವನ್ನೇ ಹಾಳುಗೆಡವಿದ ಕೇಂದ್ರ ಬಿಜೆಪಿ ಸರ್ಕಾರ – ಯುವ ಕಾಂಗ್ರೆಸ್ ನ ಹೆಚ್‍.ಪಿ.ಗಿರೀಶ್

Date:

ಪ್ರಶ್ನೆಪತ್ರಿಕೆ ಬಹಿರಂಗ ಹಾಗೂ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್- ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿದೆ. ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದೆ. ಇದು ತೀವ್ರ ಕಳವಳಕಾರಿ ಸಂಗತಿ 22 ಲಕ್ಷ ವಿದ್ಯಾರ್ಥಿಗಳ ಶ್ರಮ ವ್ಯರ್ಥ ಮಾಡಿ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿ ಮಾಡಿದ ಕೇಂದ್ರ ಸರ್ಕಾರದ ನಡೆ ತೀವ್ರ ಖಂಡನೀಯ ಎಂದು ಯುವ ಕಾಂಗ್ರೆಸ್ ನ ಹೆಚ್‍.ಪಿ.ಗಿರೀಶ್ ಅವರು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿರುವುದು ಈಗಾಗಲೇ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 90ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ಶಿಕ್ಷಣ ನೀತಿಯ ವೈಫಲ್ಯ ಎದ್ದು ಕಾಣುತ್ತಿದೆ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದಿದ್ದ ಲಕ್ಷಾಂತರ ಮಕ್ಕಳ ಮೇಲೆ ಈ ದಿಢೀರ್ ‘ಮರುಪರೀಕ್ಷೆ’ಯ ನಿರ್ಧಾರವು ಗದಾಪ್ರಹಾರದಂತಿದೆ.

“ದೇಶದ ಜನರಿಗೆ ಮನೆಯಿಂದಲೇ ಕೆಲಸ ಮಾಡಿ ಅಥವಾ ಸಾರ್ವಜನಿಕ ಸಾರಿಗೆ ಬಳಸಿ ಇಂಧನ ಉಳಿಸಿ ಎಂದು ದೊಡ್ಡ ದೊಡ್ಡ ಬುದ್ಧಿಮಾತುಗಳನ್ನು ಹೇಳುವ ಕೇಂದ್ರ ಸರ್ಕಾರಕ್ಕೆ, ಮೊದಲು ತನ್ನ ಮೂಲ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೇ? ದೇಶದ ಜನರಿಗೆ ಜೀವನಶೈಲಿಯ ಪಾಠ ಮಾಡುವ ಮೊದಲು, ಕನಿಷ್ಠ ಒಂದು ನೀಟ್ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಡೆಸುವ ಪ್ರಾಥಮಿಕ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ತೋರಲಿ,”

*ಕೇಂದ್ರ ಸರ್ಕಾರವು ಕೇವಲ ಸಿಬಿಐ ತನಿಖೆಗೆ ಆದೇಶಿಸಿ ಕೈತೊಳೆದುಕೊಂಡರೆ ಸಾಲದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಭದ್ರವಾದ ಹಾಗೂ ಪಾರದರ್ಶಕವಾದ ಪರೀಕ್ಷಾ ವ್ಯವಸ್ಥೆಯೊಂದನ್ನು ರೂಪಿಸಬೇಕು. ಇಲ್ಲವಾದರೆ ಇಡೀ ಪರೀಕ್ಷಾ ಪದ್ಧತಿಯ ಮೇಲೆಯೇ ಜನಸಾಮಾನ್ಯರಿಗೆ ಇರುವ ನಂಬಿಕೆ ಸಂಪೂರ್ಣವಾಗಿ ನಾಶವಾಗಲಿದೆ ಈಗಾಗಲೇ ಹಲವು ಬಾರಿ ಯುವ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಮಾಡಿ ಸರ್ಕಾರದ ಗಮನಕ್ಕೆ ತಂದರು ಕಾರ್ಯ ಪ್ರವೃತ್ತರಾಗದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರದ ಬಂಡತನಕ್ಕೆ ಸಾಕ್ಷಿಯಾಗಿದೆ ಪರೀಕ್ಷೆಗಳ ಅಕ್ರಮ ಪ್ರಕರಣ ಉನ್ನತ ಮಟ್ಟದಲ್ಲಿ ತನಿಖೆಯಾಗಿ ತಪ್ಪಿಸ್ತರಿಗೆ ಶಿಕ್ಷೆಯಾಗಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಈ ರೀತಿ ಸಮಸ್ಯೆ ಮರುಕಳಿಸಿದರೆ ಹೋರಾಟದ ದಿಕ್ಕು ಬದಲಾಗುತ್ತದೆ ಎಂದು ಈ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ...

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ...

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...