Thursday, May 14, 2026
Thursday, May 14, 2026

Madhu Bangarappa ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದ ಶಾಲೆಗಳಲ್ಲಿ ಹೊಸ ಮಾರ್ಗಸೂಚಿ ಜಾರಿಗೆ- ಮಧು ಬಂಗಾರಪ್ಪ

Date:

​Madhu Bangarappa ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ, ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಸೌಹಾರ್ದತೆ ಮೆರೆಯಲು ನಮ್ಮ ಸರ್ಕಾರವು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. 2022ರ ಸಮವಸ್ತ್ರ ನೀತಿಯ ಆದೇಶವನ್ನು ಅಧಿಕೃತವಾಗಿ ಹಿಂಪಡೆಯಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

​ನಮ್ಮ ಸರ್ಕಾರದ ಪ್ರಮುಖ ನಿರ್ಧಾರಗಳು:

​ಒಳಗೊಳ್ಳುವಿಕೆಯ ನಿಲುವು: ನಿಗದಿತ ಸಮವಸ್ತ್ರದೊಂದಿಗೆ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು (ಪೇಟ, ಜನಿವಾರ, ರುದ್ರಾಕ್ಷಿ, ಹಿಜಾಬ್ ಮುಂತಾದವು) ಧರಿಸಲು ಈಗ ಅವಕಾಶವಿದೆ.

​ತಾರತಮ್ಯಕ್ಕೆ ಮುಕ್ತಿ: ಯಾವುದೇ ಸಾಂಪ್ರದಾಯಿಕ ಸಂಕೇತಗಳ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ತರಗತಿ ಅಥವಾ ಪರೀಕ್ಷಾ ಕೊಠಡಿಯ ಪ್ರವೇಶ ನಿರಾಕರಿಸುವಂತಿಲ್ಲ.

​ ಸೌಹಾರ್ದತೆಯ ಸಮನ್ವಯ: ಈ ಸಂಕೇತಗಳು ಸಮವಸ್ತ್ರಕ್ಕೆ ಪೂರಕವಾಗಿರಬೇಕೇ ಹೊರತು, ಶಾಲಾ ಶಿಸ್ತು ಅಥವಾ ಭದ್ರತೆಗೆ ಅಡ್ಡಿಯಾಗಬಾರದು.

​Madhu Bangarappa ಬಲವಂತಕ್ಕೆ ಅವಕಾಶವಿಲ್ಲ: ಶಿಕ್ಷಣ ಸಂಸ್ಥೆಗಳು ಇವುಗಳನ್ನು ಕಡ್ಡಾಯಗೊಳಿಸುವಂತಿಲ್ಲ ಅಥವಾ ಬಲವಂತವಾಗಿ ತೆಗೆಸುವಂತಿಲ್ಲ.

​12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ “ಇವ ನಮ್ಮವ” ಎಂಬ ತತ್ವದಡಿ, ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಮತ್ತು ಪ್ರೀತಿಯ ವಾತಾವರಣ ನಿರ್ಮಿಸಲು ನಾವು ಬದ್ಧರಾಗಿದ್ದೇವೆ. ಮಕ್ಕಳು ಯಾವುದೇ ಅಡೆತಡೆಯಿಲ್ಲದೆ ಶಿಕ್ಷಣ ಪಡೆಯುವುದೇ ನಮ್ಮ ಪರಮೋಚ್ಚ ಗುರಿ.

​ನಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಾವೆಲ್ಲರೂ ಒಂದಾಗೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...