Friday, May 15, 2026
Friday, May 15, 2026

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕಾಂಗ್ರೆಸ್ ಚಲ್ಲಾಟ. ಸಮಾಜದಲ್ಲಿ ಕೋಮು ವಿಷ ಬೀಜ ಬಿತ್ತುತ್ತಿದ್ದಾರೆ- ಎನ್.ಕೆ.ಜಗದೀಶ್

Date:

ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಹಾಕಲು ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಅಖಾಡವನ್ನಾಗಿ ಮಾಡಿಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಾ, ಸಮಾಜದಲ್ಲಿ ಕೋಮು ವಿಷಬೀಜ ಬಿತ್ತುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್.ಕೆ. ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಬ್ಬಗೆ ನೀತಿ ಮತ್ತು ನೀಟ್ ಪರೀಕ್ಷೆ ಕುರಿತ ಅಪಪ್ರಚಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಟ್ (NEET) ಪರೀಕ್ಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ “ದ್ರೋಹ”ದ ಮಾತುಗಳನ್ನಾಡುತ್ತಿರುವುದು ಕೇವಲ ರಾಜಕೀಯ ಪ್ರೇರಿತವಾಗಿದೆ. ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಪಾರದರ್ಶಕತೆ ಕಾಪಾಡಲು ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದರೆ, ಸಿದ್ದರಾಮಯ್ಯನವರು ಅದಕ್ಕೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇವರದೇ ಸರ್ಕಾರ ನಡೆಸಿದ ಸಿಇಟಿ (CET) ಪರೀಕ್ಷೆಯಲ್ಲಿ ಸಾವಿರಾರು ಲೋಪದೋಷಗಳು ಕಂಡುಬಂದಾಗ ಮುಖ್ಯಮಂತ್ರಿಗಳ ನೈತಿಕತೆ ಎಲ್ಲೋಗಿತ್ತು? ತಮ್ಮ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಾಗದವರು ಕೇಂದ್ರ ಸಚಿವರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ. ವಿದ್ಯಾರ್ಥಿಗಳ ಪರಿಶ್ರಮದ ಬಗ್ಗೆ ಮಾತನಾಡುವ ಇವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಶೈಕ್ಷಣಿಕ ಶಿಸ್ತನ್ನು ಸಂಪೂರ್ಣವಾಗಿ ಹಾಳುಮಾಡಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವೈಫಲ್ಯ ಮತ್ತು ಓಲೈಕೆ ರಾಜಕಾರಣ

“ಮಾಡೋಕೆ ಕೆಲಸ ಇಲ್ಲದೆ, ಬೆಕ್ಕಿನ ಬಾಲ ಬೋಳಿಸಿದನಂತೆ” ಎಂಬ ಗಾದೆ ಮಾತು ನಮ್ಮ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅಕ್ಷರಶಃ ಅನ್ವಯಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ, ಶಿಕ್ಷಕರ ನೇಮಕಾತಿಗೆ ಗ್ರಹಣ ಹಿಡಿದಿದೆ. ಅದೆಷ್ಟೋ ಉದ್ಯೋಗಾಕಾಂಕ್ಷಿಗಳು ಆಸೆಗಣ್ಣಿನಿಂದ ಕಾದು ಕುಳಿತಿದ್ದರೂ, ಅವರ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದ ಸಚಿವರು, ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದ್ದರೂ ಆತುರಾತುರವಾಗಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದಾರೆ. ಶಿಕ್ಷಣ ಇಲಾಖೆಯನ್ನು ಇವರು ಸಂಪೂರ್ಣವಾಗಿ ತುಷ್ಟೀಕರಣದ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಶಿಕ್ಷಕರ ನೇಮಕಾತಿಗಿಂತಲೂ ಸಚಿವರಿಗೆ ಒಂದು ನಿರ್ದಿಷ್ಟ ಸಮುದಾಯದ ಓಲೈಕೆಯೇ ಮುಖ್ಯವಾಗಿದೆ ಎಂಬುದು ಈ ನಿರ್ಧಾರದಿಂದ ಸ್ಪಷ್ಟವಾಗಿದೆ.

ಸಮವಸ್ತ್ರ ನೀತಿಯ ಬದಲಾವಣೆ ಮತ್ತು ವಿಭಜನೆ ಮನಸ್ಥಿತಿ

ಶಾಲೆಗಳಲ್ಲಿ ಸಮಾನತೆ ಮೂಡಿಸಬೇಕಾದ ಸಮವಸ್ತ್ರ ನೀತಿಯನ್ನು ಕಾಂಗ್ರೆಸ್ ಸರ್ಕಾರವು ಹಂತ ಹಂತವಾಗಿ ನಾಶಮಾಡುತ್ತಿದೆ. ಹಿಜಾಬ್ ಧರಿಸಲು ಅವಕಾಶ ನೀಡಿರುವುದನ್ನು ಸಮರ್ಥಿಸಿಕೊಳ್ಳಲು ಜನಿವಾರ, ಪೇಟ ಮತ್ತು ರುದ್ರಾಕ್ಷಿಗಳ ಹೆಸರನ್ನು ಎಳೆದು ತರುತ್ತಿರುವುದು ಸಿದ್ದರಾಮಯ್ಯನವರ ವಿಭಜನೆ ಮನಸ್ಥಿತಿಗೆ ಸಾಕ್ಷಿ. ಶತಶತಮಾನಗಳಿಂದ ನಮ್ಮ ಸಂಸ್ಕೃತಿಯ ಭಾಗವಾಗಿರುವ ಪದ್ಧತಿಗಳನ್ನು ಹಿಜಾಬ್‌ಗೆ ಹೋಲಿಸುವುದು ಕೇವಲ ಬೌದ್ಧಿಕ ದಿವಾಳಿತನವಲ್ಲದೆ ಮತ್ತೇನೂ ಅಲ್ಲ. ಬಸವಣ್ಣನವರ “ಇವ ನಮ್ಮವ” ಎಂಬ ತತ್ವವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಕಾಂಗ್ರೆಸ್, ಶಾಲಾ ಅಂಗಳದಲ್ಲಿ ಧರ್ಮದ ಆಧಾರದ ಮೇಲೆ ಮಕ್ಕಳನ್ನು ವಿಂಗಡಿಸುವ ‘ತಾಲಿಬಾನಿ’ ಸಂಸ್ಕೃತಿಯನ್ನು ಜಾರಿಗೆ ತರುತ್ತಿದೆ.

ಸಮವಸ್ತ್ರ ನೀತಿಯ ಹೆಸರಲ್ಲಿ ಸಮಾನತೆಗೆ ಧಕ್ಕೆ

ಸಮಾನತೆ ಮತ್ತು ಸೌಹಾರ್ದತೆಯ ಹೆಸರಿನಲ್ಲಿ ತಂದಿರುವ ಹೊಸ ಸಮವಸ್ತ್ರ ನೀತಿಯು ಕೇವಲ ಮತಬ್ಯಾಂಕ್ ರಾಜಕಾರಣದ ಭಾಗವಾಗಿದೆ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಉತ್ತೇಜಿಸುವ ಮೂಲಕ ಮಕ್ಕಳ ಮನಸ್ಸಿನಲ್ಲಿ ತಾರತಮ್ಯದ ವಿಷಬೀಜ ಬಿತ್ತಲಾಗುತ್ತಿದೆ. ಕೇಂದ್ರೀಯ ವಿದ್ಯಾಲಯಗಳ ನಿಯಮವನ್ನು ಅರೆಬರೆಯಾಗಿ ಉಲ್ಲೇಖಿಸಿ ದಾರಿ ತಪ್ಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಜಿಲ್ಲಾ ಬಿಜೆಪಿಯ ಎಚ್ಚರಿಕೆ ಮತ್ತು ಆಗ್ರಹ

ರಾಜ್ಯ ಸರ್ಕಾರವು ಈ ಕೂಡಲೇ ತನ್ನ ಜನವಿರೋಧಿ ಮತ್ತು ಶಿಕ್ಷಣ ವಿರೋಧಿ ಸಮವಸ್ತ್ರ ಮಾರ್ಗಸೂಚಿಗಳನ್ನು ಹಿಂಪಡೆಯಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮತ್ತು ಸಮಾನತೆಯನ್ನು ಕಾಪಾಡಬೇಕು. ನೀಟ್ ಪರೀಕ್ಷೆಯ ಹೆಸರಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವುದನ್ನು ನಿಲ್ಲಿಸಿ, ರಾಜ್ಯದ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಮತ್ತು ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಗಮನ ಹರಿಸಬೇಕು. ಈ ಓಲೈಕೆ ರಾಜಕಾರಣವನ್ನು ನಿಲ್ಲಿಸದಿದ್ದರೆ, ವಿದ್ಯಾರ್ಥಿಗಳು ಮತ್ತು ಪೋಷಕರ ಪರವಾಗಿ ಬಿಜೆಪಿ ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಜಗದೀಶ್ ಎನ್.ಕೆ. ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...

H.K.Patil ಗದಗ ಜಿಲ್ಲೆ ಲಕ್ಕುಂಡಿ ಪುರಾತನ ವಸ್ತುಗಳನ್ನ ದೆಹಲಿ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿ ಮೆಚ್ಚಿದ ಸಚಿವ ಎಚ್.ಕೆ.ಪಾಟೀಲ್

H.K.Patil. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಇಂದು ಸನ್ಮಾನ್ಯ ಪ್ರವಾಸೋದ್ಯಮ ಸಚಿವರಾದ...