Wednesday, September 9, 2026
Wednesday, September 9, 2026

Dr. Dhananjaya Sarji ದಾವಣಗೆರೆ ಉಪಚುನಾವಣೆ ಘಟನೆಗೆ ತೇಪೆ ಹಚ್ಚು ಕೆಲಸ ಈಗ ಕಾಂಗ್ರೆಸ್ ಮಾಡಿದೆ.- ಡಾ.ಧನಂಜಯ ಸರ್ಜಿ

Date:

Dr. Dhananjaya Sarji ಶಿವಮೊಗ್ಗದಲ್ಲಿ ಎಂ ಎಲ್ ಸಿ ಡಾ. ಧನಂಜಯ್ ಸರ್ಜಿ ಅವರು ಶಾಲಾ ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಹೋಗುವ ವಿಚಾರದ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಮೊದಲಿನಿಂದಲೂ ಒಡೆದಾಳುವ ನೀತಿ ಮಾಡಿಕೊಂಡು ಬಂದಿದೆ. ನೀವೇ ಊಹಿಸಿ ಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು.
ಒಂದು ಶಾಲಾ ಕಾಲೇಜುಗಳಲ್ಲಿ ಓದುವ ಮಕ್ಕಳು ಒಂದೇ ತರ ಯೂನಿಫಮ್ ಹಾಕೊಂಡು ಹೋಗಬೇಕು ಅನ್ನೋದನ್ನ ಹೈ ಕೋರ್ಟ್ ಎತ್ತಿಹಿಡಿದಿದೆ.

ಅದನ್ನು ದಿಕ್ಕರಿಸಿ ಒಂದು ಸಮುದಾಯವನ್ನು ಓಲೈಕೆ ಮಾಡುವುದಕ್ಕೆ ದಾವಣಗೆರೆಯಲ್ಲಿ ನಡೆದ ಘಟನೆಗೆ ತೇಪೆ ಹಚ್ಚುವ ಕೆಲಸ ಮಾಡಿದೆ ಎಂದರು.

ಕಾಂಗ್ರೆಸ್ ಯಾವಾಗಲೂ ಈ ತುಷ್ಟೀಕರಣ ರಾಜಕಾರಣ ಮಾಡಿಕೊಂಡು ಬಂದಿದೆ. ಒಡೆದಾಳುವ ನೀತಿಯಲ್ಲೇ ಕಾಂಗ್ರೆಸ್ ಬೆಳೆದು ಬಂದಿದೆ.
ಎಷ್ಟೋ ಮುಸಲ್ಮಾನ ಹೆಣ್ಣುಮಕ್ಕಳ ಮೇಲೆ ಪರಿಣಾಮ ಬೀರಬಹುದು.
ಎಷ್ಟೋ ಜನ ಹೆಣ್ಣುಮಕ್ಕಳಿಗೆ ಸ್ನೇಹಿತರು ಇರುತ್ತಾರೆ. ಕೆಲವರು ಹಿಜಾಬ್ ಹಾಕುತ್ತಾರೆ ,ಕೆಲವರು ಹಾಕುತ್ತಿಲ್ಲ. ಇದು ಎಷ್ಟು ಡಿಫ್ರೆನ್ಸ್ ಆಗಬಹುದು .ನಾವೇ ಇದನ್ನು ಪ್ರತ್ಯೇಕ ಮಾಡಿದ ಹಾಗೆ ಎಂದರು.

Dr. Dhananjaya Sarji ಕಾಂಗ್ರೆಸ್ ಮುಸಲ್ಮಾನರ ತುಷ್ಟೀಕರಣಕ್ಕೆ ವಿಧ್ಯಾರ್ಥಿಗಳ ಮದ್ಯೆ ದ್ವೇಷ ಬಿತ್ತುತ್ತಿದೆ. ಹಾಗಾದರೆ ಒಬ್ಬರು ಒಬ್ಬರು ಒಂದೊಂದು ಹಿಜಾಬ್ ಕೇಸರಿ ಶಾಲು ಪೇಟಾ ಹೀಗೆ ಹಾಕೊಂಡು ಬರಬಹುದಲ್ಲ… ಕಾಂಗ್ರೆಸ್ ಹೀಗೆ ಮಾಡೋದು ಖಂಡನೀಯ. ಇದನ್ನು ನಾವು ದಿಕ್ಕರಿಸುತ್ತೇವೆ ಮತ್ತು ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...