Wednesday, July 1, 2026
Wednesday, July 1, 2026

B.Y. Vijayendra ಬಿಜೆಪಿ ಸರ್ಕಾರ ಜಾರಿಮಾಡಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ- ಬಿ.ವೈ.ವಿಜಯೇಂದ್ರ

Date:

B.Y. Vijayendra ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಮತ್ತು ಶಾಲಾ ಮಕ್ಕಳಲ್ಲಿ ಏಕತೆಯನ್ನು ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡನೀಯ! ಎಂದು ರಾಜ್ಯ ಬಿಜೇಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣ ಹೇಳಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ಕ್ರಮವನ್ನ ಖಂಡಿಸಿದ್ದಾರೆ.

ಸಮವಸ್ತ್ರದ ಮೂಲ ಆಶಯವೇ ಮಕ್ಕಳಲ್ಲಿ ಮೇಲು-ಕೀಳು, ಜಾತಿ-ಮತದ ಭೇದ ಮರೆಸಿ ಸಮಾನತೆಯ ದೀಕ್ಷೆ ನೀಡುವುದಾಗಿದೆ. ಮಕ್ಕಳ ಮನಸ್ಸಿನಲ್ಲಿ ‘ನಾವೆಲ್ಲರೂ ಒಂದು’ ಎಂಬ ಭಾವನೆ ಬಿತ್ತುವ ಬದಲು, ಕೇವಲ ಅವರ ಓಟ್ ಬ್ಯಾಂಕ್ ವರ್ಗದ ಓಲೈಕೆಗಾಗಿ ಶಾಲಾ ಆವರಣದಲ್ಲೂ ಮತೀಯ ವಿಭಜನೆಗೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕೈಹಾಕಿದೆ. ಈ ಮೂಲಕ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರ ಸರ್ಕಾರ ಶೈಕ್ಷಣಿಕ ಪಾವಿತ್ರ್ಯತೆಗಿಂತ ವೋಟ್ ಬ್ಯಾಂಕ್ ರಾಜಕಾರಣಕ್ಕೇ ಆದ್ಯತೆ ನೀಡುತ್ತದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಮಕ್ಕಳಿಗೆ ಹಿಜಾಬ್ ಧರಿಸಲು ಸರ್ಕಾರ ಅವಕಾಶ ನೀಡಿ, ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವ ನಿಮ್ಮ ತುಘಲಕ್ ಆದೇಶವನ್ನು ಕೂಡಲೇ ಹಿಂಪಡೆಯಿರಿ!

ಶಿಕ್ಷಣ ಸಂಸ್ಥೆಗಳು ಜ್ಞಾನ ಸರೋವರವಿದ್ದಂತೆ, ಇಲ್ಲಿ ವಸ್ತ್ರ ಸಂಹಿತೆ (ಸಮವಸ್ತ್ರ) ಶಿಸ್ತು, ಸಮಭಾವ ಹಾಗೂ ಸಹೋದರತ್ವ ಭಾವವನ್ನು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಲ್ಲಿ ಕೋಮು ಸಂಕೇತ ಪ್ರತಿನಿಧಿಸುವ ವಸ್ತ್ರ ಧರಿಸಲು ಅವಕಾಶ ನೀಡುವುದು ಹಾಗೂ ಪ್ರೇರಣೆ ನೀಡುವುದು ಶಿಕ್ಷಣ ಸರೋವರಕ್ಕೆ ಕೆಸರು ತುಂಬುವ ಕೆಟ್ಟ ನಡೆಯಾಗುತ್ತದೆ. ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರ ಅಕ್ಷರಶಃ ಅವಿವೇಕಿತನದ ಪರಮಾವಧಿಯಾಗಿದೆ.

ಮಾನ್ಯ ಮುಖ್ಯಮಂತ್ರಿಗಳೇ, ಸರ್ವವ್ಯಾಪಿ ಸರ್ವಸ್ಪರ್ಶಿ ನಿರ್ಮಲ ಸರೋವರದಂತೆ, ಜ್ಞಾನ ದೀವಿಗೆ ಬೆಳಗುತ್ತಿರುವ ನಮ್ಮ ಶಿಕ್ಷಣ ವ್ಯವಸ್ಥೆಗೆ ಕೋಮು ಸಂಕೇತಿಸುವ ಹಿಜಾಬ್ ನಿಂದ ಉಸಿರುಗಟ್ಟಿಸಿ, ಶಿಕ್ಷಣ ಕ್ಷೇತ್ರದಲ್ಲಿಯೂ ಕೋಮುವಾದದ ಜ್ವಾಲೆ ಹತ್ತಿಸಬೇಡಿ!

B.Y. Vijayendra ಶಿಕ್ಷಣ ಸುಧಾರಣೆಯ ಯೋಜನೆ ಹಾಗೂ ಕಾರ್ಯಕ್ರಮಗಳ ಕುರಿತು ತಲೆಕೆಡಿಸಿಕೊಳ್ಳದ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ಕಟ್ಟಡಗಳ ಸುರಕ್ಷತೆ, ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿಯೂ ವಿಫಲವಾಗಿದೆ, ನೈಜ ಶಿಕ್ಷಣ ಬದ್ಧತೆಯನ್ನು ಪ್ರದರ್ಶಿಸುವ ಬದಲು ಸದ್ಯ ಇರುವ ವ್ಯವಸ್ಥೆಯನ್ನೂ ಕುಲಗೆಡಿಸುತ್ತಿರುವುದು ಶಿಕ್ಷಣ ವಿದ್ರೋಹಿ ಕ್ರಮವಾಗಿದೆ. ಈ ಕೂಡಲೇ ಹಿಜಾಬ್ ಅನುಮತಿಯ ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳದೇ ಹೋದರೆ ಮುಂದೆ ಉದ್ಭವಿಸಲಿರುವ ಪರಿಸ್ಥಿತಿಗಳಿಗೆ ಕಾಂಗ್ರೆಸ್‌ ಸರ್ಕಾರವೇ ನೇರ ಹೊಣೆಯಗಲಿದೆ. ಎಂದು ಶಾಸಕ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ದೇಶಪ್ರೇಮಿಯಾಗಿ ಎಸ್ಐಆರ್ ಪ್ರಕ್ರಿಯೆಗೆ ಸಹಕರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ರಾಜ್ಯ ಹಾಗೂ ದೇಶದ ಸಾರ್ವಜನಿಕ ಭದ್ರತೆ ಕಾಪಾಡುವ ನಿಟ್ಟಿನಲ್ಲಿ...

S.N. Channabasappa ನಗರದ ಜಲಮೂಲವಾಗಿರುವ ಚಾನಲ್ ಗಳನ್ನು ಸ್ವಚ್ಛವಾಗಿಡುವುದು ಇಲಾಖೆಯ ಹೊಣೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ...

International Anti-Drug Day ಕಳೆದ ಆರು ತಿಂಗಳಲ್ಲಿ ಸು.₹ 25 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ- ಬಿ.ನಿಖಿಲ್

International Anti-Drug Day ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ...