Thursday, July 2, 2026
Thursday, July 2, 2026

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Date:

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ ತುಂಬಿದ್ದ ಬೊಲೆರೋ ವಾಹನದ ಟೈರ್ ಸ್ಫೋಟಗೊಂಡು ಸಂಭವಿಸಿದ ಸರಣಿ ಅಪಘಾತದಲ್ಲಿ ಬುಲೆಟ್ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದ ಸಂಜೆ ಜಾವಳ್ಳಿ ಬಳಿ ಇಟ್ಟಿಗೆ ಲೋಡ್‌ ತುಂಬಿಕೊಂಡು ಚಲಿಸುತ್ತಿದ್ದ ಬೊಲೆರೋ ವಾಹನದ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನವು ಮೊದಲು ಸಂಪತ್ ಕುಮಾರ್ ಅವರ ಬುಲೆಟ್ ಬೈಕ್‌ಗೆ ಡಿಕ್ಕಿಯಾಗಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ.
Breaking News ಅಪಘಾತದ ತೀವ್ರತೆಗೆ ಸಂಪತ್ ಕುಮಾರ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಹಾಗೂ ಕಾರಿನಲ್ಲಿದ್ದ ಐದಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related