B.Y. Raghavendra ಶಿವಮೊಗ್ಗದ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ! ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಸಮಿತಿ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಭವ್ಯ ಅಡ್ಡಪಲ್ಲಕ್ಕಿ ಮಹೋತ್ಸವ, ಬೃಹತ್ ಧರ್ಮಜಾಗೃತಿ ಸಮಾವೇಶ ಹಾಗೂ ಪೂಜ್ಯ ತಂದೆಯವರಾದ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಆಯೋಜಿಸಲಾಗಿದ್ದ “ಕೃತಜ್ಞತಾ ಸಮರ್ಪಣಾ ಸಮಾರೋಪ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಪರಮಪೂಜ್ಯ ಪಂಚಪೀಠಾಧೀಶ್ವರರಾದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು (ಬಾಳೆಹೊನ್ನೂರು ಪೀಠ), ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು (ಉಜ್ಜಯಿನಿ ಪೀಠ), ಶ್ರೀಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು (ಕೇದಾರ ಪೀಠ), ಶ್ರೀಮದ್ ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು. B.Y. Raghavendra (ಶ್ರೀಶೈಲ ಪೀಠ), ಶ್ರೀಮದ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ವಿದ್ಯಾಬಾಚಸ್ಪತಿ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು (ಕಾಶಿ ಪೀಠ) ಪೀಠಗಳ ಪರಮಪೂಜ್ಯ ಜಗದ್ಗುರುಗಳ ದಿವ್ಯ ಸನ್ನಿಧಾನದಲ್ಲಿ, ಸುಮಾರು 4 ಕಿಲೋಮೀಟರ್ ಸಾಗಿದ ವೈಭವದ ಅಡ್ಡಪಲ್ಲಕ್ಕಿ ಮೆರವಣಿಗೆಯು ಶಿವಮೊಗ್ಗ ನಗರದಾದ್ಯಂತ ಭಕ್ತಿಯ ಅಲೆ ಎಬ್ಬಿಸಿತು. ತದನಂತರ ಅಲ್ಲಮಪ್ರಭು ಬಯಲು (ಫ್ರೀಡಂ ಪಾರ್ಕ್) ಆವರಣದ ಮಾನವಧರ್ಮ ಮಂಟಪದಲ್ಲಿ ನಡೆದ ಸಮಾವೇಶದಲ್ಲಿ ಸಹಸ್ರಾರು ಭಕ್ತ ಮಹಾಶಯರು ಪಾಲ್ಗೊಂಡು ಪುನೀತರಾದರು.
