Thursday, May 21, 2026
Thursday, May 21, 2026

5000 ಕ್ಕೂ ಹೆಚ್ಚು ಬಡ ಕೂಲಿಕಾರ್ಮಿಕರ ಪಡಿತರ ಚೀಟಿ ರದ್ದು: ಕ್ರಮವನ್ನು ಪುನರ್ಪರಿಶೀಲಿಸಲು ಮನವಿ

Date:

ಇಂದು ಬೆಂಗಳೂರಿನ ಆಹಾರ ನಿಗಮದ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀಕೆ ಎಚ್. ಮುನಿಯಪ್ಪ ರವರನ್ನು ಭೇಟಿ ಮಾಡಿ, ಶಿವಮೊಗ್ಗ ನಗರದಲ್ಲಿ ವಾಸವಾಗಿರುವ ಸುಮಾರು 5000ಕ್ಕೂ ಅಧಿಕ ಬಡ ಕೂಲಿ ಕಾರ್ಮಿಕರ ಪಡಿತರ ಚೀಟಿಗಳನ್ನು ರದ್ದುಪಡಿಸಿರುವ ಕ್ರಮವನ್ನು ಪುನರ್ ಪರಿಶೀಲಿಸಬೇಕೆಂದು ಹಾಗೂ ನಗರದ ಹೊರವಲಯದಲ್ಲಿರುವ ಗೋಪಾಲಗೌಡ ಬಡಾವಣೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಅನೌಪಚಾರಿಕ ಪಡಿತರ ಪ್ರದೇಶ ಸಹಾಯಕ ನಿರ್ದೇಶಕರ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಲು ಯಾವುದೇ ರೀತಿಯ ಬಸ್ ಸಂಪರ್ಕ ಇಲ್ಲದಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಸದರಿ ಕಚೇರಿಯನ್ನು ಶಿವಮೊಗ್ಗ ನಗರದ ವಿನೋಬನಗರದಲ್ಲಿ ವ್ಯವಸ್ಥಿತವಾಗಿ ಬಸ್ ಸಂಪರ್ಕ ಹೊಂದಿರುವ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ವಾಣಿಜ್ಯ ಸಂಕೀರ್ಣದಲ್ಲಿ ಖಾಲಿ ಇರುವ ಹಳೆ ಸಬ್ ರಿಜಿಸ್ಟರ್ ಕಚೇರಿಗೆ ಸ್ಥಳಾಂತರಿಸಿ, ಶಿವಮೊಗ್ಗ ನಗರದ ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿಯನ್ನು ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಸಚಿವರು, ಸಾರ್ವಜನಿಕರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...