Sunday, July 12, 2026
Sunday, July 12, 2026

ಪ.ಜಾ/,ಪ.ವರ್ಗಗಳ ವಿದ್ಯಾರ್ಥಿ/ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಸಾಗರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆ ಪ್ರತಿಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್ ಅವರಿಗೆ ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಕಳೆದ ಸಾಲಿನ ಅಂಕಪಟ್ಟಿ,ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ,
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಾಗಿದ್ದಲ್ಲಿ ಎಸ್ ಎ ಟಿ ಎಸ್ ಐಡಿ(SATS ID)
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಾಗಿದ್ದಲ್ಲಿ ಎಸ್ ಎಸ್ ಪಿ ಐಡಿ ಮತ್ತು ಯೂನಿವರ್ಸಿಟಿ ರಿಜಿಸ್ಟ್ರೇಷನ್ ನಂಬರ್ ನ್ನು‌‌ ಅರ್ಜಿಯೊಂದಿಗೆ ಸಲ್ಲಿಸಬೇಕು.
ಈ ಪ್ರವೇಶಾತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸಾಗರ ತಾಲೂಕು ಇವರನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ: 9480843192 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...