ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ “ಬೃಹತ್ ಪ್ರತಿಭಟನೆ” ಹಾಗೂ “ರಾಜಭವನ ಚಲೋ” ಚಳವಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಜಿ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಶಾಲಾ ಶಿಜ್ಷಣ ಸಚಿವ ಮಧು ಬಂಗಾರಪ್ಪ ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ಬೇಜವಾಬ್ದಾರಿತನದ ವಿರುದ್ಧ ಧ್ವನಿ ಎಲ್ಲರೂ ಎತ್ತಿದರು.
ನಮ್ಮ ರಾಜ್ಯದ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚು ಮಕ್ಕಳು ಹಗಲಿರುಳು ಕಷ್ಟಪಟ್ಟು ಈ ಪರೀಕ್ಷೆಗೆ ಸಿದ್ಧರಾಗಿದ್ದರು. ಆದರೆ ಕೇಂದ್ರದ ಅಸಮರ್ಥತೆಯಿಂದಾಗಿ ಇಂದು ಆ ಮಕ್ಕಳ ಭವಿಷ್ಯ ಅತಂತ್ರವಾಗಿದೆ. ದೇಶದ ಹಲವು ಕಡೆ ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದು ಅತ್ಯಂತ ಹೃದಯ ವಿದ್ರಾವಕ ಸಂಗತಿ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ದೇಶದ ಭವಿಷ್ಯವನ್ನು ನಿರ್ಮಿಸಬೇಕಾದ ಯುವಶಕ್ತಿಯ ಕನಸುಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಹೊಸಕಿ ಹಾಕುತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಕ್ಕಳ ಕಣ್ಣೀರು ಒರೆಸುವ ಬದಲು ಜವಾಬ್ದಾರಿಯಿಂದ ನುಣುಚಿಕೊಂಡು ವಿದೇಶ ಪ್ರವಾಸಗಳಲ್ಲಿ ನಿಶ್ಚಿಂತರಾಗಿ ಕಾಲ ಕಳೆಯುತ್ತಿದ್ದಾರೆ..!
ಬಿಜೆಪಿಯ ಈ ಭ್ರಷ್ಟ ವ್ಯವಸ್ಥೆಯಿಂದ ದೇಶದ ಮಕ್ಕಳ ಭವಿಷ್ಯವನ್ನು ಕಾಪಾಡಬೇಕಾದ ಅನಿವಾರ್ಯತೆ ಇಂದು ಎದುರಾಗಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತದಿದ್ದರೆ ದೇಶದ ಶಿಕ್ಷಣ ವ್ಯವಸ್ಥೆಯೇ ನಾಶವಾಗುತ್ತದೆ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಮಧು ಬಂಗಾರಪ್ಪ ಕೇಂದ್ರ ಸರ್ಕಾರದ ಅಸಮರ್ಥತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಈ ಬೃಹತ್ ಪ್ರತಿಭಟನೆಯಲ್ಲಿ ಸಚಿವರುಗಳಾದ ಶ್ರೀ ಈಶ್ವರ್ ಖಂಡ್ರೆ, ಶ್ರೀ ಎಂ.ಸಿ ಸುಧಾಕರ್, ಶ್ರೀ ಬೈರತಿ ಸುರೇಶ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಬಾನು ಚಿಬ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಸೇರಿದಂತೆ ಪಕ್ಷದ ಮುಖಂಡರು, ಮಾಜಿ ಸಚಿವರು, ಶಾಸಕರುಗಳು, ವಿಧಾನಪರಿಷತ್ ಶಾಸಕರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
