Saturday, July 11, 2026
Saturday, July 11, 2026

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Date:

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF) ಶಿವಮೊಗ್ಗ ಚಾಪ್ಟರ್‌ನ 2026 ರಿಂದ 2028ರ ದ್ವೈವಾರ್ಷಿಕ ಅವಧಿಗೆ ನೂತನ ಕೌನ್ಸಿಲ್ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮಲ್ನಾಡ್ ಅಲಾಯ್ ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾದ ಶ್ರೀ ಮಹಾವೀರ್ ಜೈನ್ ಅವರು ನೂತನ ಕೌನ್ಸಿಲ್‌ನ ಅಧ್ಯಕ್ಷರಾಗಿ (Chairman) ಮತ್ತು ಸ್ಮಿತಾ ಎಂಟರ್‌ಪ್ರೈಸಸ್‌ನ ಮಾಲೀಕರಾದ ಶ್ರೀ ಎಂ. ಎಸ್. ಅರುಣ್ ಅವರು ಉಪಾಧ್ಯಕ್ಷರಾಗಿ (Vice Chairman) ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ದೀಪ್ ಇಂಡಸ್ಟ್ರೀಸ್‌ನ ಪಾಲುದಾರರಾದ ಶ್ರೀ ಪ್ರದೀಪ್ ಆರ್. ಅವರು ಗೌರವಾನ್ವಿತ ಕಾರ್ಯದರ್ಶಿಯಾಗಿ ಹಾಗೂ ರಾಗ್ ಎಂಟರ್‌ಪ್ರೈಸಸ್‌ನ ಮಾಲೀಕರಾದ ಶ್ರೀ ಆನಂದ್ ಕೋಟಿ ಎಚ್. ಆರ್. ಅವರು ಗೌರವಾನ್ವಿತ ಖಜಾಂಚಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
Institute of International Finance ನೂತನ ಕೌನ್ಸಿಲ್‌ನ ಸದಸ್ಯರಾಗಿ ಶಿವಮೊಗ್ಗದ ಪ್ರಮುಖ ಕೈಗಾರಿಕೋದ್ಯಮಿಗಳು ಮತ್ತು ತಜ್ಞರು ಆಯ್ಕೆಯಾಗಿದ್ದಾರೆ. ಶಾಂತಲಾ ಸ್ಫೆರೋಕಾಸ್ಟ್ ಪ್ರೈವೇಟ್ ಲಿಮಿಟೆಡ್‌ನ ಹೆಚ್.ಆರ್. ವ್ಯವಸ್ಥಾಪಕರಾದ ಶ್ರೀ ನಂಜುಂಡೇಶ್ವರ ಹೆಚ್. ಬಿ., ಎಸ್‌ಎನ್‌ಎಸ್ ಅಲಾಯ್ ಕಾಸ್ಟಿಂಗ್ಸ್‌ನ ಪಾಲುದಾರರಾದ ಶ್ರೀ ಚಂದನ್ ಎನ್. ಹೊಳ್ಳ, ಶ್ರೀ ವಾಸವಿ ಫೌಂಡ್ರಿ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾದ ಶ್ರೀ ಸುರೇಶ್ ಎಂ. ಹಾಗೂ ಟೆಕ್ನೋ ರಿಂಗ್ಸ್‌ನ ಪಾಲುದಾರರಾದ ಶ್ರೀ ಭೂಪಾಳಂ ಸತ್ಯನಾರಾಯಣ ಭಾರತ್ ಅವರು ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಲಿದ್ದಾರೆ.ಇವರೊಂದಿಗೆ ಪರ್ಲೈಟ್ ಲೈನರ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕರಾದ ಶ್ರೀ ಅಕ್ಷಯ್ ದತ್ ಜೆ., ಬಸವಶ್ರೀ ಎಂಟರ್‌ಪ್ರೈಸಸ್‌ನ ಪಾಲುದಾರರಾದ ಶ್ರೀ ಮಂಜಪ್ಪ ಎಚ್. ಎಸ್., ಜೆ.ಎನ್.ಎನ್. ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಶಾಂತಿ ಕಿರಣ್ ಎಂ. ಮತ್ತು ಸಿತಾಸ್ -ಎನ್‌ಡಿಟಿ ಎಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್‌ನ ಜನರಲ್ ಮ್ಯಾನೇಜರ್ ಆದ ಶ್ರೀ ಲೋಕೇಶ್ ಎಚ್. ಎಸ್. ಅವರು ಕೌನ್ಸಿಲ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...