Wednesday, September 9, 2026
Wednesday, September 9, 2026

B.Y. Raghavendra ಬೇಸೂರು ಅಣು ವಿದ್ಯುತ್ ಸ್ಥಾವರ : ಜನರು ಆತಂಕಪಡುವ ಅವಶ್ಯಕತೆಯಿಲ್ಲ- ಬಿ.ವೈ.ರಾಘವೇಂದ್ರ.

Date:

B.Y. Raghavendra “ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು ಆತಂಕ ಪಡುವ ಅವಶ್ಯಕತೆಯಿಲ್ಲ”- ‘ಜನರಿಗೆ ಹಾಗೂ ಪರಿಸರಕ್ಕೆ ಹಾನಿಯಾಗುವ ಯೋಜನೆ ಜಾರಿಗೆ ನಮ್ಮ ವಿರೋಧವಿದೆ’
ಎಂದು ಸಂಸದ ಬಿ.ವೈ‌‌.ರಾಘವೇಂದ್ರ ಘಂಟಾಘೋಷವಾಗಿ ಹೇಳಿದ್ದಾರೆ.

ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಸಂಬಂಧ ಗ್ರಾಮೀಣ ಭಾಗದ ಜನರು ಆತಂಕದಲ್ಲಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಈ ಕೆಳಕಂಡ ಮಾಹಿತಿಯನ್ನು ಸಾರ್ವಜನಿಕರ ಗಮನಕ್ಕೆ ತರಲು ಬಯಸುತ್ತೇನೆ.

ಕೇಂದ್ರ ಸರ್ಕಾರ ಅಧೀನದ ಎನ್.ಟಿ.ಪಿ.ಸಿ (National Thermal Power Corporation) ಸಂಸ್ಥೆಯಿಂದ ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನಗಳು ಹಾಗೂ ಭೂ-ವೈಜ್ಞಾನಿಕ ಪರಿಶೀಲನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ.

ವಿಷಯ ಗಮನಕ್ಕೆ ಬರುತ್ತಿದ್ದಂತೆ, ಶಿವಮೊಗ್ಗ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಲಾಗಿಲ್ಲವೆಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

B.Y. Raghavendra ಶರಾವತಿ ಸಂತ್ರಸ್ತರಿಗೆ ಇಂದಿಗೂ ಸಮರ್ಪಕ ಭೂಪರಿಹಾರ ಒದಗಿಸಲಾಗಿಲ್ಲ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಸರ ಆಸಕ್ತರು ಮತ್ತು ಬುದ್ಧಿ ಜೀವಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿರುತ್ತಾರೆ. ಈ ಸಂಬಂಧ ಕೇಂದ್ರ ಸಚಿವರಿಗೆ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿಸದಂತೆ ಪ್ರಸ್ತಾವನೆಯನ್ನು ಕೈಬಿಡಲು ಮನವರಿಕೆ ಮಾಡಿಕೊಡಲಾಗುವುದು.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಪರಿಸರ ಹಾನಿ ಉಂಟಾಗುವ ಯಾವುದೇ ಯೋಜನೆಗೂ ತಮ್ಮ ಸ್ಪಷ್ಟ ವಿರೋಧವಿದ್ದು, ಜನರ ಹಿತಾಸಕ್ತಿ ಕಾಪಾಡಲು ಬದ್ಧರಾಗಿರುತ್ತೇನೆ ಎಂದು ಬಿ.ವೈ‌.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...