Wednesday, September 9, 2026
Wednesday, September 9, 2026

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸಿ ಎಂ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Date:

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ “ರಾಜ್ಯಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆ (KPS) ಅಡಿಗಲ್ಲು ಸಮಾರಂಭ”ದ ಹಿನ್ನೆಲೆಯಲ್ಲಿ, ಇಂದು ಶಿವಮೊಗ್ಗದ ‘ಅಲ್ಲಮ ಪ್ರಭು ಮೈದಾನ’ ಕ್ಕೆ ಉನ್ನತ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸಲಿರುವ ಈ ಬೃಹತ್ ಕಾರ್ಯಕ್ರಮದ ವೇದಿಕೆ ನಿರ್ಮಾಣ, ಸಾರ್ವಜನಿಕ ಸೌಕರ್ಯ, ಟ್ರಾಫಿಕ್ ದಟ್ಟಣೆ ಹಾಗೂ ಭದ್ರತಾ ವ್ಯವಸ್ಥೆಗಳು ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಮೂಡಿಬರಲು ಅಧಿಕಾರಿಗಳಿಗೆ ಸೂಕ್ತ ಸಲಹೆ ಮತ್ತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.

Madhu Bangarappa ಈ ವೇಳೆ ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಸಿಇಒ ಶ್ರೀ ಹೇಮಂತ್ ಕುಮಾರ್, ಎಸ್ಪಿ ಶ್ರೀ ನಿಖಿಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಶ್ ಬಾನು, ಜವಳಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...