Wednesday, September 9, 2026
Wednesday, September 9, 2026

ವಿಶೇಷ ಮತದಾರರ ಪಟ್ಡಿ ಪರಿಷ್ಕರಣೆ ಅಭಿಯಾನ- ಎಸ್.ದತ್ತಾತ್ರಿ. ಶಿವಮೊಗ್ಗ

Date:

ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ನೀಡಿರುವುದು ಒಂದು ವಿಶೇಷ ವ್ಯವಸ್ಥೆ. ಈ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಅವಶ್ಯಕತೆ ಇರುವ ಸಂದರ್ಭಗಳಲ್ಲಿ ಪರಿಷ್ಕರಣೆ ಮಾಡಿ ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸಿ, ನಿಧನ ಹೊಂದಿದವರ, ವರ್ಗಾವಣೆಗೊಂಡವರ, ಅಕ್ರಮವಾಗಿ ನೆಲೆಸಿ ನಾಗರೀಕರೆಂದು ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಿಕೊಂಡವರನ್ನು ಪತ್ತೆಹಚ್ಚಿ ಆ ಹೆಸರುಗಳನ್ನು ತೆಗೆದು, ಹೊಸದಾಗಿ ಮತದಾರ ಪಟ್ಟಿಯನ್ನು ರಚಿಸುವುದೇ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ.

ಕರ್ನಾಟಕದಲ್ಲಿ 30.06.26 ರಿಂದ BLO ಗಳ ಮುಖಾಂತರ ಈ ಕಾರ್ಯ ಪ್ರಾರಂಭವಾಗಲಿದೆ.ಈ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಚುನಾವಣಾ ಆಯೋಗಕ್ಕೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಲು ರಾಜ್ಯ ಬಿಜೆಪಿ ವತಿಯಿಂದ ತಂಡ ರಚಿಸಿ ಈಗಾಗಲೇ ಕಳೆದ ಆರು ತಿಂಗಳಿಂದ ಕಾರ್ಯವನ್ನು ಮುಖ್ಯವಾಗಿದೆ.

ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬೀನ್ ರವರು ರಾಜ್ಯದ ಎಸ್ಐಆರ್ ತಂಡದೊಂದಿಗೆ ಸಭೆ ನಡೆಸಿ ಸಾಕಷ್ಟು ಮಾಹಿತಿಗಳನ್ನು ಪಡೆದು, ಅನೇಕ ಸಲಹೆ ಸೂಚನೆಗಳನ್ನು ನೀಡಿದರು ರಾಷ್ಟ್ರೀಯ ಪಕ್ಷದ ಅಧ್ಯಕ್ಷರೊಬ್ಬರು ಈ ರೀತಿ SIR ಬಗ್ಗೆ ಅತ್ಯಂತ ಹೆಚ್ಚು ಪ್ರಾಶಸ್ತ್ಯ ನೀಡಿ ಸಲಹೆ ಮಾರ್ಗದರ್ಶನ ನೀಡಿ ,ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗೂಳಿಯದಂತೆ ನೋಡುವ ನಮ್ಮ ಪಕ್ಷದ ಕಾರ್ಯಕರ್ತರ ಜವಾಬ್ದಾರಿಯನ್ನು ತಿಳಿಸಿದರು.

ಈ ಸಭೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೀವ್ ವಿಧಾನ ಪರಿಷತ್ ಸದಸ್ಯರಾದ ಶ್ರೀ ನವೀನ್, ಸಹ ಸಂಚಾಲಕರಾದ ಶ್ರೀಮತಿ ಶ್ಯಾಮಲಾ ಹಾಗೂ ಈ ಕಾರ್ಯವನ್ನು ಮುನ್ನಡೆಸುತ್ತಿರುವ ವಿಭಾಗಗಳ ಸಂಯೋಜಕರುಗಳು ಉಪಸ್ಥಿತರಿದ್ದರು.

ವಿಶೇಷ ವರದಿ:
ಎಸ್ ದತ್ತಾತ್ರಿ,
ರಾಜ್ಯ ಸಂಚಾಲಕರು,
ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರೀಕ್ಷಕರಣೆ ತಂಡ,( SIR)
ಬಿಜೆಪಿ ಕರ್ನಾಟಕ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...