Monday, May 25, 2026
Monday, May 25, 2026

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Date:

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಬೆಳೆಸಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ವಿದುಷಿ ಶ್ವೇತಾ ಪ್ರಕಾಶ್ ಅವರನ್ನು ಸನ್ಮಾನಿಸಿ ಮಾತನಾಡಿ, ವೈವಿಧ್ಯ ಕಲಾಪ್ರಕಾರಗಳ ಕಲಿಕೆಯು ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ಮಾತನಾಡಿ, ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ಕಲಿಕೆಯ ಜತೆಗೆ ಭರತನಾಟ್ಯ ಕಡೆಗೆ ಆಸಕ್ತಿ ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಮಕ್ಕಳು ಮೊಬೈಲ್, ಡಿಜಿಟಲ್ ಉಪಕರಣಗಳಲ್ಲಿ ಸಮಯ ವ್ಯರ್ಥ ಮಾಡಲು ಬಿಡದೆ ಅವರಲ್ಲಿ ಉತ್ತಮ ಆಸಕ್ತಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ಮಯೂರಿ ನಾಟ್ಯಶಾಲೆಯ ವಿದುಷಿ ಶ್ವೇತಾ ಪ್ರಕಾಶ್ ಮಾತನಾಡಿ, ಭರತನಾಟ್ಯ ಭಾರತೀಯ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುತ್ತದೆ. ಮಕ್ಕಳಲ್ಲಿ ಶಿಸ್ತು, ಸಂಯಮ ಬೆಳೆಸುತ್ತದೆ ಎಂದು ಹೇಳಿದರು.

Rotary Shivamogga ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಿಯೋಜಿಯ ಸೇನಾನಿ ಎ.ಒ.ಮಹೇಶ್, ಶ್ರೀಕಾಂತ್, ಆದಿಮೂರ್ತಿ, ಕೃಷ್ಣಮೂರ್ತಿ, ಡಾ. ಗುಡದಪ್ಪ ಕಸಬಿ, ಚಂದ್ರಶೇಖರಯ್ಯ, ಪರಮೇಶ್ವರ್ ಶಿಗ್ಗಾವ್, ಆಶಿತ್, ಜಗದೀಶ್, ಶ್ರೀನಿವಾಸ್ ಗೌಡ, ಎಸ್.ಗಣೇಶ್, ಬಿ.ಗಂಗಪ್ಪ ರೋಟರಿ ಶಿವಮೊಗ್ಗ ಪೂರ್ವ ಸದಸ್ಯರು ಹಾಗೂ ಕುಟುಂಬದ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸಿ ಎಂ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...