Wednesday, September 9, 2026
Wednesday, September 9, 2026

ದೇವಸ್ಥಾನಗಳ ಹುಂಡಿಹಣ ಕಳವು.ಕಳ್ಳನ ಸೆರೆ

Date:

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಕಲು ಸಮೀಪದ ಹೊಸಕೆರೆ ದೇವಸ್ಥಾನದಲ್ಲಿ ಹುಂಡಿ ಹಣ ಕಳವು ಮಾಡುತ್ತಿದ್ದ ಕಳ್ಳನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯೊಬ್ಬ ಬಳಿಕ ಆ ಹಣದಲ್ಲಿ ಎಣ್ಣೆ ಖರೀದಿಸಲು ಸ್ಥಳೀಯ ಬಾರ್‌ಗೆ ತೆರಳಿದ್ದಾನೆ. ಈ ವೇಳೆ ಆತ ನೀಡಿದ ನೋಟುಗಳಲ್ಲಿ ಕುಂಕುಮದ ಕಲೆ ಇರುವುದನ್ನು ಗಮನಿಸಿದ ಬಾರ್ ಮಾಲೀಕ ವರ್ಧನ್ ಅವರಿಗೆ ಅನುಮಾನ ಬಂದಿದೆ.

ತಕ್ಷಣವೇ ಆರೋಪಿಯನ್ನು ವಿಚಾರಿಸಿದಾಗ ದೇವಸ್ಥಾನದ ಹುಂಡಿ ಹಣ ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಬಳಿಕ ವರ್ಧನ್ ಹಾಗೂ ಅವರ ಸ್ನೇಹಿತ ನಿತಿನ್ ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳೀಯರ ಜಾಗೃತಿಯಿಂದ ದೇವಸ್ಥಾನದ ಹಣ ಕಳವು ಪ್ರಕರಣ ಬಯಲಾಗಿದ್ದು, ಬಾರ್ ಮಾಲೀಕ ವರ್ಧನ್ ಮತ್ತು ನಿತಿನ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...