Wednesday, September 9, 2026
Wednesday, September 9, 2026

B.Y. Raghavendra ನ್ಯಾಯಕ್ಕಾಗಿ 300 ಕಿಮೀ ಅಲೆದಾಟ: ಭೌಗೋಳಿಕವಾಗಿ ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸೂಕ್ತ- ಬಿ.ವೈ.ರಾಘವೇಂದ್ರ.

Date:

B.Y. Raghavendra ನ್ಯಾಯ ಎಲ್ಲರಿಗೂ ಸುಲಭವಾಗಿ ಸಿಗಬೇಕು’ ಎನ್ನುವುದು ಸಂವಿಧಾನದ ಆಶಯ. ಆದರೆ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರು ನ್ಯಾಯಕ್ಕಾಗಿ 300ಕ್ಕೂ ಹೆಚ್ಚು ಕಿಲೋಮೀಟರ್ ದೂರದ ಬೆಂಗಳೂರಿಗೆ ಅಲೆಯಬೇಕಾದ ಪರಿಸ್ಥಿತಿ ಇದೆ. ಧಾರವಾಡ ಮತ್ತು ಕಲಬುರಗಿ ಮಾದರಿಯಲ್ಲಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳನ್ನು ಬೆಸೆಯುವ ಮಧ್ಯಬಿಂದುವಾಗಿರುವ ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದು ಭೌಗೋಳಿಕವಾಗಿ ಹಾಗೂ ನ್ಯಾಯದ ದೃಷ್ಟಿಯಿಂದ ಅತ್ಯಗತ್ಯವಾಗಿದೆ.

ಜಸ್ವಂತ್ ಸಿಂಗ್ ಆಯೋಗ ನಿಗದಿಪಡಿಸಿರುವ ಎಲ್ಲಾ ಮಾನದಂಡಗಳನ್ನು ನಮ್ಮ ಶಿವಮೊಗ್ಗ ಪೂರ್ಣವಾಗಿ ಪೂರೈಸುತ್ತದೆ.

B.Y. Raghavendra ಕೆಲವರು ಮಂಗಳೂರು ಪೀಠದ ವ್ಯಾಪ್ತಿಗೆ ಶಿವಮೊಗ್ಗವನ್ನು ಸೇರಿಸುವ ಮಾತನಾಡುತ್ತಿದ್ದಾರೆ. ಆದರೆ ಭೀಕರ ಮಳೆಗಾಲದಲ್ಲಿ ಶಿರಾದಿ, ಚಾರ್ಮಾಡಿ ಅಥವಾ ಆಗುಂಬೆ ಘಾಟ್‌ಗಳಂತಹ ಅಪಾಯಕಾರಿ ರಸ್ತೆಗಳನ್ನು ದಾಟಿ ಜನರು ಮಂಗಳೂರಿಗೆ ಸಂಚರಿಸಿ ನ್ಯಾಯ ಪಡೆಯುವುದು ಪ್ರಾಯೋಗಿಕವಾಗಿ ಅಸಾಧ್ಯ. ಅದಕ್ಕಾಗಿಯೇ ವಕೀಲರ ಸಮುದಾಯ ಮತ್ತು ವಿವಿಧ ಬಾರ್ ಅಸೋಸಿಯೇಷನ್‌ಗಳು ಮಂಗಳೂರು ಪ್ರಸ್ತಾಪವನ್ನು ತಿರಸ್ಕರಿಸಿವೆ.

ನಿಮ್ಮ ಸಂಸದನಾಗಿ ಕೇಂದ್ರ ಕಾನೂನು ಸಚಿವಾಲಯದ ಮಟ್ಟದಲ್ಲಿ ಈ ಪ್ರಸ್ತಾಪಕ್ಕೆ ಧ್ವನಿಯಾಗಲು ನಾನು ಬದ್ಧನಾಗಿದ್ದೇನೆ. ರಾಜ್ಯ ಸರ್ಕಾರವು ಅಗತ್ಯ ಮೂಲಸೌಕರ್ಯ ಒದಗಿಸಿ, ಮುಖ್ಯ ನ್ಯಾಯಮೂರ್ತಿಗಳ ಸಹಮತಿಯೊಂದಿಗೆ ಕೇಂದ್ರಕ್ಕೆ ಸ್ಪಷ್ಟ ಪ್ರಸ್ತಾಪವನ್ನು ಸಲ್ಲಿಸಬೇಕಿದೆ. ಶಿವಮೊಗ್ಗ ಹೈಕೋರ್ಟ್ ಪೀಠ ಸ್ಥಾಪನೆಯಾಗುವವರೆಗೆ ನಾವೆಲ್ಲರೂ ಪಕ್ಷಾತೀತವಾಗಿ ಒಟ್ಟಾಗಿ ಹೋರಾಡೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...