Tuesday, May 26, 2026
Tuesday, May 26, 2026

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

Date:

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ ಅಮೃತ್ ನೋನಿ ಉತ್ಪಾದನಾ ಕೇಂದ್ರದಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ್ ಪರಿಸರ ಅವರು ಪರಿಸರದಲ್ಲಿ ಜೀವವೈವಿಧ್ಯತೆಯ ಪ್ರಾಮುಖ್ಯತೆ ಮತ್ತು ಸಂರಕ್ಷಣೆ ಕುರಿತು ವಿವರಿಸಿದರು.

ಪರಿಸರದಲ್ಲಿ ಪ್ಲಾಸ್ಟಿಕ್ ನಿಂದ ಆಗುತ್ತಿರುವ ಅನಾಹುತಗಳು ಜೀವ ವೈದ್ಯತೆಯ ನಾಶ ಮಾನವ ವನ್ಯಜೀವಿಗಳ ಮೇಲೆ ಹೆಚ್ಚುತ್ತಿರುವ ದುಷ್ಪರಿಣಾಮಗಳ ಕುರಿತು ತಿಳಿಸುತ್ತಾ ಸರ್ಕಾರ 20 22 ರಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿರುವುದು ನಿಜ ಆದರೆ ಉತ್ಪತ್ತಿಯನ್ನು ನಿಲ್ಲಿಸಲಿಲ್ಲ, ಎಲ್ಲಿಯವರೆಗೂ ಉತ್ಪತ್ತಿಯನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಅದರ ಬಳಕೆ ನಿಲ್ಲುವುದಿಲ್ಲ .

ಪ್ರತಿನಿತ್ಯ ಸಾವಿರಾರು ಜೀವಿಗಳು ಪ್ಲಾಸ್ಟಿಕ್ ನ ಹಾವಳಿಯಿಂದ ನಶಿಸುತ್ತಿವೆ ಇದರ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ಗಂಡಾಂತರವನ್ನು ಎದುರಿಸಬೇಕಾಗುತ್ತದೆ. ಪರಿಸರ ಸಂರಕ್ಷಣೆಯಲ್ಲಿ ಸರ್ಕಾರದ ಜೊತೆ ಸಾರ್ವಜನಿಕರಾದ ನಾವೆಲ್ಲ ಕೈಜೋಡಿಸುವುದರಿಂದ ಮಾತ್ರ ಈ ಪ್ಲಾಸ್ಟಿಕ್ ನಿಂದ ಆಗುವ ದುಷ್ಪರಿಣಾಮಗಳನ್ನು ನಿಲ್ಲಿಸಲು ಸಾಧ್ಯ ಹಾಗಾಗಿ ನಾವೆಲ್ಲರೂ ಎಚ್ಚೆತ್ತುಕೊಂಡು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಮೂಲಕ ನಾವುಗಳು ನಮ್ಮ ಜೊತೆ ಜೀವವೈವಿಧ್ಯವನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

International Day for Biological Diversity ಬೇಕು ಗಳಿಗೆ ಕಡಿವಾಣ ಹಾಕಿ ಸಾಕು ಎನ್ನುವ ಮನಸ್ಥಿತಿಯನ್ನು ಅಳವಡಿಸಿಕೊಂಡರೆ ಪರಿಸರ ಸಂರಕ್ಷಣೆ ಮಾಡಲು ಸಹಾಯವಾಗುತ್ತದೆ. ಪ್ರತಿಯೊಬ್ಬರು ತಾವು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವಾಗ ಕೇಕ್ ಕತ್ತರಿಸುವುದರ ಬದಲು ಗಿಡ ನೆಟ್ಟು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ್ ನೋನಿ ವ್ಯಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀನಿವಾಸಮೂರ್ತಿ ಅವರು ವಹಿಸಿಕೊಂಡು ಅಮೃತ್ ನೋನಿ ಸಂಸ್ಥೆಯು ಬೆಳೆದು ಬಂದ ಹಾದಿಯನ್ನು ಸರಳವಾಗಿ ತಿಳಿಸಿ ಪರಿಸರದ ಪ್ರಾಮುಖ್ಯತೆಯ ಬಗ್ಗೆ ಪ್ರತಿಯೊಬ್ಬರಿಗೂ ಕಾಳಜಿ ಇರುವುದು ಅನಿವಾರ್ಯವಾಗಿದೆ ನಾವೆಲ್ಲ ಸೇರಿ ಈ ಸಂರಕ್ಷಣೆ ಕಾರ್ಯದಲ್ಲಿ ಭಾಗವಹಿಸೋಣ ಎಂದು ತಿಳಿಸುತ್ತಾ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ತಂಡದೊಂದಿಗೆ ಕಾರ್ಯನಿರ್ವಹಿಸಿದರೆ ಎಂತಹ ಸಾಧನೆಯನ್ನು ಮಾಡಲು ಸಾಧ್ಯವಿದೆ ಇದಕ್ಕೆ ನಮ್ಮ ಸಂಸ್ಥೆ ಸಾಕ್ಷಿ ಎಂದು ಹೇಳಿ ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಮೂರ್ತಿ ಅವರ ಕುಟುಂಬಸ್ಥರು ಅಮೃತ್ ನೋನಿ ವ್ಯಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆಯ ಎಲ್ಲ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು
ಶ್ರೀ ಶಶಿಕಾಂತ್ ನಾಡಿಗ್ ನಿರ್ವಹಿಸಿ ಪ್ರಶ್ನೋತ್ತರ ಕಾರ್ಯಕ್ರಮವನ್ನು ನಡೆಸುವುದರ ಮೂಲಕ ಜೀವವೈವಿಧ್ಯತೆಯ ಪ್ರಾಮುಖ್ಯತೆಯನ್ನು ತಿಳಿದು ನಾವೆಲ್ಲ ಹುಟ್ಟು ಹಬ್ಬದ ಸಂದರ್ಭದಲ್ಲಿ “ಕೇಕ್ ಬಿಡಿ ಗಿಡ ನೆಡಿ” ಎಂಬ ಅಭಿಯಾನದಲ್ಲಿ ಭಾಗವಹಿಸೋಣ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ...