Wednesday, May 27, 2026
Wednesday, May 27, 2026

Inner Wheel Club ಶಿಕ್ಷಣ, ಆರೋಗ್ಯ, ಪರಿಸರ ,ಮಹಿಳಾ ಸಬಲೀಕರಣ ಚಟುವಟಿಕೆಯಲ್ಲಿ ಇನ್ನರ್ ವೀಲ್ ಸಂಸ್ಥೆ ಸದಾ ಮುಂದಿದೆ- ಶಬರಿ ಕಡಿದಾಳ್

Date:

Inner Wheel Club ಇನ್ನರ್ ವ್ಹೀಲ್ ಕ್ಲಬ್ ವಿಶ್ವದ ಅತಿದೊಡ್ಡ ಮಹಿಳಾ ಸೇವಾ ಸಂಸ್ಥೆಗಳಲ್ಲಿ ಒಂದಾಗಿದ್ದು, ನೂರಕ್ಕೂ ಹೆಚ್ಚು ದೇಶಗಳಲ್ಲಿ ಒಂದು ಲಕ್ಷ ಸದಸ್ಯರನ್ನು ಹೊಂದಿದೆ ಇನ್ನರ್ ವ್ಹೀಲ್ ಕ್ಲಬ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಹೇಳಿದರು.

ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಹಾಗೂ ಸನ್ ಬೋನ್ ಮತ್ತು ಸ್ಪೈನ್ ೆ್ಪಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ “ಇನ್ನರ್ ವ್ಹೀಲ್ ರೋಗಿಗಳ ಆರೈಕೆ ಉಪಕರಣ ಕೇಂದ್ರ”ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣ, ಆರೋಗ್ಯ, ಪರಿಸರ, ಮಹಿಳಾ ಸಬಲೀಕರಣ ಹಾಗೂ ಸಮಾಜಮುಖಿ ಸೇವಾ ಯೋಜನೆಗಳನ್ನು ಇನ್ನರ್ ವ್ಹೀಲ್ ಸಂಸ್ಥೆ ನಡೆಸುತ್ತಿದೆ ಎಂದು ತಿಳಿಸಿದರು.

ಇನ್ನರ್ ವ್ಹೀಲ್ ರೋಗಿಗಳ ಆರೈಕೆ ಉಪಕರಣ ಕೇಂದ್ರವನ್ನು ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಸ್.ನಟರಾಜ್ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನರ್ ವೀಲ್ ಕ್ಲಬ್ ಜೊತೆಗೂಡಿ ಸಮಾಜ ಸೇವಾ ಕಾರ್ಯಕ್ರಮಗಳಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದರು.

ಇನ್ನರ್ ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕೆ ವೀಣಾ ಸುರೇಶ್ ಮಾತನಾಡಿ, ಅಪಘಾತ, ಶಸ್ತ್ರಚಿಕಿತ್ಸೆ, ಸ್ಟ್ರೋಕ್ ಹಾಗೂ ವೃದ್ಧಾಪ್ಯ ಸಮಸ್ಯೆಗಳಿಂದ ಬಳಲುವ ಅನೇಕ ರೋಗಿಗಳಿಗೆ ತಾತ್ಕಾಲಿಕವಾಗಿ ವೀಲ್ ಚೇರ್, ಪೇಷೆಂಟ್ ಕಾಟ್ ಮತ್ತು ಮ್ಯಾಟ್ರೆಸ್, ವಾಕರ್, ಕ್ರಚ್, ಏರ್ ಬೆಡ್, ಕಮೋಡ್ ಹೊಂದಿರುವ ವ್ಹೀಲ್ ಚೇರ್ ಮುಂತಾದ ವೈದ್ಯಕೀಯ ಉಪಕರಣಗಳ ಅವಶ್ಯಕತೆ ಉಂಟಾಗುತ್ತದೆ ಎಂದು ಹೇಳಿದರು.

Inner Wheel Club ಬಡ ಹಾಗೂ ಹಿಂದುಳಿದ ವರ್ಗದವರಿಗೆ ಇವುಗಳನ್ನು ಖರೀದಿಸುವುದು ಕಷ್ಟವಾಗುತ್ತದೆ. ಇಂತಹ ರೋಗಿಗಳಿಗೆ ಕಡಿಮೆ ಮಾಸಿಕ ಬಾಡಿಗೆಯೊಂದಿಗೆ ಠೇವಣಿ ಆಧಾರದಲ್ಲಿ ಉಪಕರಣಗಳನ್ನು ನೀಡಲಾಗುತ್ತದೆ. ಉತ್ತಮ ಸ್ಥಿತಿಯಲ್ಲಿ ಉಪಕರಣಗಳನ್ನು ಹಿಂತಿರುಗಿಸಿದರೆ ಠೇವಣಿ ಮೊತ್ತವನ್ನು ಮರುಪಾವತಿಸಲಾಗುತ್ತದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶೇ 50 ರಿಯಾಯಿತಿ ನೀಡಲಾಗುತ್ತದೆ ಎಂದರು.

ಯೋಜನೆಯ ಮೂಲಕ ಸಂಗ್ರಹವಾಗುವ ಹಣವನ್ನು ಮುಂದಿನ ದಿನಗಳಲ್ಲಿ ಬೇಡಿಕೆಯ ಆಧಾರದ ಮೇಲೆ ಇನ್ನಷ್ಟು ಉಪಕರಣಗಳನ್ನು ಖರೀದಿಸಲು ಬಳಸಲಾಗುತ್ತದೆ ಮನೆಗಳಲ್ಲಿ ಬಳಸದೆ ಇರುವ, ಉತ್ತಮ ಸ್ಥಿತಿಯಲ್ಲಿರುವ ವೈದ್ಯಕೀಯ ಉಪಕರಣಗಳನ್ನು ಸಾರ್ವಜನಿಕರು ದಾನ ಮಾಡುವಂತೆ ಮನವಿ ಮಾಡಿದರು.

ಸನ್ ಬೋನ್ & ಸ್ಪೈನ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಆಕಾಶ್ ಮಾತನಾಡಿ, ಈ ಯೋಜನೆ ಸಮಾಜಕ್ಕೆ ಬಹಳ ಉಪಯುಕ್ತವಾಗಿದ್ದು, ಉತ್ತಮ ಸೇವಾ ಕಾರ್ಯಗಳಿಗೆ ಸಹಕಾರ ನೀಡಲಾಗುತ್ತದೆ ಎಂದರು.

ಚೇತನಾ ಕಿರಣ್, ಪಿಡಿಸಿ ವರಿಜಾ ಜಗದೀಶ್, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವೀರಣ್ಣ ಹುಗ್ಗಿ, ಮೂರ್ತಿ, ಶಂಕರ್, ಬಿಂದು ವಿಜಯಕುಮಾರ್, ವೀಣಾ ಹರ್ಷ, ರಾಜೇಶ್ವರಿ ಪ್ರತಾಪ್, ಜಯಂತಿ ವಾಲಿ, ಜ್ಯೋತಿ ಸುಬ್ಬೇಗೌಡ, ಇನ್ನರ್ ವೀಲ್ ಸದಸ್ಯೆಯರು, ರೋಟರಿಯನ್ಸ್, ವೈದ್ಯರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...

B.Y. Vijayendra ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ. ಅವಧಿಗೆ ಮುನ್ನವೇ ಚುನಾವಣೆ- ಬಿ.ವೈ.ವಿಜಯೇಂದ್ರ

B.Y. Vijayendra ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದೆಹಲಿಯಲ್ಲಿ...

B.Y. Raghavendra ಶಿಕಾರಿಪುರದಲ್ಲಿ ಸಂಸದ ರಾಘವೇಂದ್ರ ನೇತೃತ್ವದಲ್ಲಿ ರೈತರ ಪ್ರತಿಭಟನಾ ಸಭೆ

B.Y. Raghavendra ರಾಜ್ಯ ಕಾಂಗ್ರೆಸ್ ಸರ್ಕಾರದ ನಿರಂತರ ರೈತ ವಿರೋಧಿ ಧೋರಣೆಗಳನ್ನು...