Wednesday, September 9, 2026
Wednesday, September 9, 2026

ವಸತಿ ಶಾಲೆಗಳ 7 ಮತ್ತು 8 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Date:

2026-27ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕೆಪಿಎಸ್‌ಸಿಎಸ್‌ಎಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ಹಾಗೂ ಶ್ರೀ ನಾರಾಯಣ ಗುರು ವಸತಿ ಶಾಲೆಗಳ 7 ಮತ್ತು 8ನೇ ತರಗತಿ ಮಧ್ಯಂತರ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಸಾಮಾನ್ಯ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ದಿನಾಂಕ 01.06.2026 ರಿಂದ 12.06.2026 ರವರೆಗೆ ಹತ್ತಿರದ ವಸತಿ ಶಾಲೆಗಳಿಗೆ ತೆರಳಿ ಅರ್ಜಿ ಪಡೆದು, ನಿಗದಿತ ತಾಲ್ಲೂಕುವಾರು ಪರೀಕ್ಷಾ ಕೇಂದ್ರಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರವೇಶ ಪರೀಕ್ಷೆಯು ದಿನಾಂಕ: 20.06.2026 ರಂದು ಅಪರಾಹ್ನ 11:00 ರಿಂದ 1:00 ರವರೆಗೆ ನಡೆಯಲಿದೆ.
ತಾಲ್ಲೂಕುವಾರು ಪರೀಕ್ಷಾ ಕೇಂದ್ರಗಳ ವಿವರ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಕುಂಸಿ, ಶಿವಮೊಗ್ಗ ತಾಲ್ಲೂಕು. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಹುಣಸೇಕಟ್ಟೆ, ಭದ್ರಾವತಿ ತಾಲ್ಲೂಕು. ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ತಾಳಗುಪ್ಪ, ಸಾಗರ ತಾಲ್ಲೂಕು. ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಅಗ್ರಹಾರ, ತೀರ್ಥಹಳ್ಳಿ  ತಾಲ್ಲೂಕು ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಗೇರುಪುರ 273, ಹೊಸನಗರ ತಾಲ್ಲೂಕು. ಶ್ರೀ ನಾರಾಯಣ ಗುರು ವಸತಿ ಶಾಲೆ, ಹಿರೇಶಕುನ ಸೊರಬ ತಾಲ್ಲೂಕು.ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಳವೂರು, ಶಿಕಾರಿಪುರ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಹತ್ತಿರದ ವಸತಿ ಶಾಲೆಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಶಪ್ಪ‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...