Wednesday, September 9, 2026
Wednesday, September 9, 2026

B.Y. Raghavendra ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರದ ಚರ್ಚೆಗೆ ಸಂಸದ ರಾಘವೇಂದ್ರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ.

Date:

B.Y. Raghavendra ಶಿಕಾರಿಪುರ ತಾಲ್ಲೂಕಿನ ರೈತ ಬಾಂಧವರ ಹಾಗೂ ಸಾರ್ವಜನಿಕರ ದಶಕಗಳ ಪ್ರಮುಖ ತೊಂದರೆಗೆ ಕಾರಣವಾಗಿರುವ ಡೀಮ್ಡ್ ಫಾರೆಸ್ಟ್ (ಭಾವಿತ ಅರಣ್ಯ) ಸಮಸ್ಯೆಗೆ ತಾರ್ಕಿಕ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಕಾರಿಪುರದಲ್ಲಿ ಒಂದು ಮಹತ್ವದ ಜಂಟಿ ಸಮಾಲೋಚನಾ ಸಭೆಯನ್ನು ಸಂಸದ ಬಿ.ವೈ.ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಉನ್ನತ ಮಟ್ಟದ ಸಭೆಯು ಶಿಕಾರಿಪುರ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಮತ್ತು ಪ್ರಮುಖರಾದ ಶ್ರೀ ಕೆ.ಎಸ್. ಗುರುಮೂರ್ತಿ ಅವರ ಉಪಸ್ಥಿತಿ ಹಾಗೂ ಜಂಟಿ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.

ಸಭೆಯಲ್ಲಿ ತಾಲ್ಲೂಕಿನ ತಹಶೀಲ್ದಾರರು, ವಲಯ ಅರಣ್ಯಾಧಿಕಾರಿಗಳು (RFO) ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರುವ ಜಮೀನುಗಳ ವಾಸ್ತವ ಸ್ಥಿತಿಗತಿ, ಗಡಿರೇಖೆ ಗೊಂದಲ ಆಗುತ್ತಿರುವ ತಾಂತ್ರಿಕ ಲೋಪದೋಷಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

B.Y. Raghavendra ಸಭೆಯ ಕೊನೆಯಲ್ಲಿ, ಇಲಾಖೆಗಳ ನಡುವಿನ ಗೊಂದಲಗಳನ್ನು ತಕ್ಷಣವೇ ನಿವಾರಿಸಲು ಜಂಟಿ ಸರ್ವೆ ನಡೆಸಬೇಕೆಂದು ಅಧಿಕಾರಿಗಳಿಗೆ ಸಂಸದರು ಮತ್ತು ಶಾಸಕರು ನಿರ್ದೇಶನ ನೀಡಿದರು. ಇದರೊಂದಿಗೆ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಅರ್ಹ ಸಾಗುವಳಿ ಜಮೀನುಗಳನ್ನು ಮುಕ್ತಗೊಳಿಸಲು ಮತ್ತು ಮಲೆನಾಡಿನ ರೈತರ ಹಿತರಕ್ಷಣೆಯನ್ನು ಕಾಯ್ದುಕೊಳ್ಳಲು ಸರ್ಕಾರದ ಉನ್ನತ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಸಮಾಲೋಚಿಸಲಾಯಿತು. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಆಡಳಿತಾತ್ಮಕವಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಿರಂತರವಾಗಿ ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...