Wednesday, September 9, 2026
Wednesday, September 9, 2026

Agricultural University ಯುವಜನರಲ್ಲಿ ಜನಪದ ಅರಿವು ಮೂಡಿಸುವ ಅಗತ್ಯವಿದೆ-ಬಿ.ಟಾಕಪ್ಪ.

Date:

Agricultural University ಇರುವುಕ್ಕಿಯ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಆವರಣದಲ್ಲಿ “ನಿರಂತರ-2026” ಹೆಸರಿನಲ್ಲಿ ಸಾಂಪ್ರದಾಯಿಕ ದಿನ ಹಾಗೂ ಜಾನಪದ ಕಲಾ ಉತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಕಣ್ಣೂರೇಶ್ವರ ಜಾನಪದ ಕಲಾಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಈ ಉತ್ಸವವು ವಿದ್ಯಾರ್ಥಿಗಳು ಹಾಗೂ ಕಲಾಭಿಮಾನಿಗಳ ಗಮನ ಸೆಳೆಯಿತು.
ಸಾಂಪ್ರದಾಯಿಕ ಉಡುಪುಗಳಲ್ಲಿ ಕಂಗೊಳಿಸಿದ ವಿದ್ಯಾರ್ಥಿಗಳು ವಿವಿಧ ಸಂಸ್ಕೃತಿಯ ವೈವಿಧ್ಯತೆಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮವನ್ನು ಶಿಕ್ಷಣ ನಿರ್ದೇಶಕರಾದ ಡಾ. ಹೇಮ್ಲಾ ನಾಯ್ಕ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಿಶೇಷಾಧಿಕಾರಿಗಳಾದ ಡಾ. ಕೆ.ಸಿ. ಶಶಿಧರ್ ವಹಿಸಿದ್ದರು.
Agricultural University ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಾನಪದ ಕಲಾವಿದ ಬಿ. ಟಾಕಪ್ಪ ಕಣ್ಣೂರು ಜಾನಪದ ಕಲೆಗಳ ಮಹತ್ವವನ್ನು ವಿವರಿಸಿ, ಯುವಜನರಲ್ಲಿ ಜನಪದ ಸಂಸ್ಕೃತಿಯ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಇದೇ ವೇಳೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ. ಆರ್.ಸಿ. ಜಗದೀಶ್ ವಿವಿಧ ಕಲಾತಂಡಗಳನ್ನು ಅಭಿನಂದಿಸಿ, ಕಲಾವಿದರಿಗೆ ಸನ್ಮಾನ ಹಾಗೂ ನೆನಪಿನ ಕಾಣಿಕೆಗಳನ್ನು ವಿತರಿಸಿದರು. ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸಲು ವಿಶ್ವವಿದ್ಯಾಲಯ ಸದಾ ಬೆಂಬಲ ನೀಡಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...