Tuesday, July 14, 2026
Tuesday, July 14, 2026

Sigandur Bridge ಸಿಗಂದೂರು ಸೇತುವೆ ಕೆಳಭಾಗ ಈಜಲು ಹೋದ ವ್ಯಕ್ತಿ ಸಾವು.

Date:

Sigandur Bridge ಶಿವಮೊಗ್ಗ ಸಿಗಂದೂರು ಸೇತುವೆ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಆಂಧ್ರ ಮೂಲದ ಯುವಕ ಸಾವು
ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ ಯುವಕನು ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ಆಂಧ್ರಪ್ರದೇಶದ ರಾಯದುರ್ಗ ನಿವಾಸಿ ಉಮೇಶ್ (30) ಎಂದು ಗುರುತಿಸಲಾಗಿದೆ.

ಮಾಹಿತಿಯಂತೆ, ಬುಧವಾರ ಮಧ್ಯಾಹ್ನ ಉಮೇಶ್ ಅವರು ಸಿಗಂದೂರು ಸೇತುವೆಯ ಕೆಳಭಾಗದ ಮುಳುಗಡೆ ಪ್ರದೇಶದಲ್ಲಿ ಈಜಲು ನೀರಿಗೆ ಇಳಿದಿದ್ದರು. ಈ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿದ ಅವರು ನಿಯಂತ್ರಣ ಕಳೆದುಕೊಂಡು ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದರು.

Sigandur Bridge ಜೊತೆಯಲ್ಲಿದ್ದವರು ತಕ್ಷಣ ಸ್ಥಳೀಯರು ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸಾಗರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಶೋಧ ಕಾರ್ಯಾಚರಣೆ ನಡೆಸಿದರು.

ಕೆಲವು ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಉಮೇಶ್ ಅವರ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.

ಈ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಅರ್ಹ ಯುವ ಮತದಾರರು ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಾಗ್ರತೆವಹಿಸಿ- ಬಿ.ವೈ.ರಾಘವೇಂದ್ರ

B.Y. Raghavendra ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನಿರಂತರ ಜನಸಂಪರ್ಕ...

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...