ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ 17ನೇ ಮೈಲಿಗಲ್ಲಿನ ಸಮೀಪದ ಮನೆಯೊಂದರಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು.
ಮಾಹಿತಿ ತಿಳಿದ ತಕ್ಷಣ ಉರಗ ತಜ್ಞ ಸ್ನೇಕ್ ಕಿರಣ್ ಸ್ಥಳಕ್ಕೆ ಧಾವಿಸಿ ಯಶಸ್ವಿಯಾಗಿ ಹಾವನ್ನು ರಕ್ಷಣೆ ಮಾಡಿದ್ದಾರೆ.
ಮಂಡಗದ್ದೆ ಶಾಖೆಯ ಕಣಗಲಕೊಪ್ಪ ಗ್ರಾಮದ ಮನೆಯೊಂದರ ಸೌದೆ ಬಲೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮನೆಯವರು ಆತಂಕಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಅರಣ್ಯಾಧಿಕಾರಿಗಳ ಸೂಚನೆಯ ಮೇರೆಗೆ ಉರಗ ತಜ್ಞ ಸ್ನೇಕ್ ಕಿರಣ್ ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಲವು ನಿಮಿಷಗಳ ಕಾರ್ಯಾಚರಣೆಯ ಬಳಿಕ ಸುಮಾರು 15 ಅಡಿ ಉದ್ದ ಹಾಗೂ 8.5 ಕೆಜಿಗೂ ಅಧಿಕ ತೂಕವಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿಯುವಲ್ಲಿ ಯಶಸ್ವಿಯಾದರು.
