Friday, July 24, 2026
Friday, July 24, 2026

H.S. Sundaresh ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು- ಹೆಚ್.ಎಸ್.ಸುಂದರೇಶ್.

Date:

H.S. Sundaresh ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

ಗೋಪಾಲಗೌಡ ಬಡಾವಣೆಯ ‘ಎ’ ಬ್ಲಾಕ್ ನಿವಾಸಿಗಳ ಸಂಘದ ವತಿಯಿಂದ ಆಯೋಜಿಸಿದ್ದ ಪುರಂದರ ಯೋಗ ಭವನ ಉದ್ಘಾಟನೆ, ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಜಾಗೃತಿ ಮೂಡಿಸಲು ಪೂರಕವಾದ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ. ಪ್ರತಿ ನಿತ್ಯ ಎಲ್ಲರೂ ಯೋಗಾಭ್ಯಾಸ ಮಾಡಬೇಕು. ಇದರಿಂದ ಮಾನಸಿಕ ನೆಮ್ಮದಿ ಲಭಿಸುತ್ತದೆ ಎಂದು ತಿಳಿಸಿದರು.

ಬಡಾವಣೆಯ ಸಂಘದ ಅಧ್ಯಕ್ಷ ಎಸ್.ಸಿ.ರಾಮಚಂದ್ರ ಮಾತನಾಡಿ, ಬಡಾವಣೆಯಲ್ಲಿ ಸಂಘ ರಚಿಸಿದ ನಂತರ ಬಡಾವಣೆಯ ಜನರಿಗೆ ಅನುಕೂಲವಾಗುವಂತೆ ಆರೋಗ್ಯದ ದೃಷ್ಟಿಯಿಂದ ಈ ಪಾರ್ಕ್ ನಿರ್ವಹಣೆಯನ್ನು ವಹಿಸಿಕೊಂಡು ಶಿವಮೊಗ್ಗದ ಮಾದರಿ ಪಾರ್ಕ್ ಆಗಿ ಮಾರ್ಪಡಿಸಲಾಗಿದೆ. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂದರು.

H.S. Sundaresh ಸುಬ್ಬಯ್ಯ ಆಸ್ಪತ್ರೆಯ ವೈದ್ಯ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಪಿ.ರಾಜೇಶ್ ಮತ್ತು ವಿನಯ್ ರಕ್ತದಾನ ಮಾಡಿದರು. ಎನ್.ವಿ.ಭಟ್ ಕಾರ್ಯಕ್ರಮ ನಿರೂಪಿಸಿದರು. ಗಣೇಶ.ಹೆಚ್.ಎಸ್ ಸ್ವಾಗತಿಸಿದರು. ಪಂಚಾಕ್ಷರಯ್ಯ ಹೆಚ್ ವಂದನಾರ್ಪಣೆ ನಡೆಸಿಕೊಟ್ಟರು.

ಸಂಘದ ಗೌರವಾಧ್ಯಕ್ಷ ಆದಿಮೂರ್ತಿ, ಗಂಗಾಧರ್, ಎಂ.ಚAದ್ರಶೇಖರ್, ರವಿ, ತನು, ಗಣೇಶ್, ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಜಿ.ಧನರಾಜ್, ಪಂಚಾಕ್ಷರಯ್ಯ ಹಿರೇಮಠ್, ನಾರಾಯಣ್, ಸತೀಶ್, ಗೀತೇಂದ್ರ, ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...