ದೈವಜ್ಞ ಮಹಿಳಾ ಮಂಡಳಿಯು ನಿರಂತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ವಿಶೇಷ ಕೆಲಸ ಮಾಡುತ್ತಿದೆ ಎಂದು ದೈವಜ್ಞ ಮಹಿಳಾ ಮಂಡಳಿ ಅಧ್ಯಕ್ಷೆ ಸೀಮಾ ಸದಾನಂದ ಹೇಳಿದರು.
ದೈವಜ್ಞ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಮಾತನಾಡಿ, 30 ವರ್ಷಗಳಿಂದ ಸೃಜನಾತ್ಮಕ, ಕ್ರಿಯಾಶೀಲತೆಯ ಕೆಲಸಗಳನ್ನು ಮಾಡುತ್ತಿದೆ ಎಂದರು.
ಶ್ರೀನಿವಾಸ ಕಲ್ಯಾಣ ಮಾಡುವುದರಿಂದ ದಂಪತಿಗಳ ಜೀವನದಲ್ಲಿ ಸುಖ ಸಂತೋಷ ಪ್ರಾಪ್ತಿಯಾಗಿ ಸಂತೋಷ ಉಲ್ಲಾಸದಿಂದ ಇರುತ್ತಾರೆ. ನಮ್ಮ ಧಾರ್ಮಿಕ ನಂಬಿಕೆಗಳನ್ನು ಪಾಲಿಸುವುದರಿಂದ ಮನಸ್ಸು ಉಲ್ಲಸಿತವಾಗಿ ನೆಮ್ಮದಿಯಿಂದ ಜೀವನ ನಡೆಸಬಹುದು. ಧರ್ಮ ಸಂಸ್ಕೃತಿ ಸಂಪ್ರದಾಯ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ತಿಳಿಸಿದರು.
ಕಾರ್ಯದರ್ಶಿ ವಾಣಿ ಪ್ರವೀಣ್ ಮಾತನಾಡಿ, ಶ್ರೀನಿವಾಸ ಕಲ್ಯಾಣದಿಂದ ಮನಸ್ಸಿಗೆ ಶಾಂತಿ, ಆತ್ಮ ತೃಪ್ತಿ ದೈವ ಭಕ್ತಿಯ ಜೊತೆಗೆ ಕುಟುಂಬದ ಎಲ್ಲರಿಗೂ ಒಳಿತಾಗುತ್ತದೆ. ಪ್ರತಿ ವರ್ಷ ಈ ರೀತಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪ್ರೇಮ ರಮೇಶ್, ಅರ್ಚನಾ ಅಣ್ಣಪ್ಪ, ಸಹ ಕಾರ್ಯದರ್ಶಿ ಸುಧಾ ಸುರೇಶ್, ಚೇತನಾ ವಾದಿರಾಜ್, ಖಜಾಂಚಿ ರೂಪ ರವಿಪ್ರಕಾಶ್ ಮತ್ತು ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ, ಇತರೆ ಎಲ್ಲಾ ದೈವಜ್ಞ ಸಮಾಜದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಉಪಸ್ಥಿತರಿದ್ದರು. ದೇವತಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಆಡಳಿತ ಮಂಡಳಿ, ನಿರ್ದೇಶಕರು, ಮಾಜಿ ಅಧ್ಯಕ್ಷರು, ಸದಸ್ಯರೆಲ್ಲರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.
ಧರ್ಮ,ಸಂಸ್ಕೃತಿ , ಸಂಪ್ರದಾಯ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು- ಸೀಮಾ ಸದಾನಂದ
Date:
