Tuesday, June 9, 2026
Tuesday, June 9, 2026

ಎಸ್.ಎಫ್.ಸಿ.ನಿಧಿ ಯೋಜನೆಯಡಿ ಪಜಾ/ ಪ.ಪಂ /ವಿಶೇಷ ಚೇತನರು/ ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯ ಧನ,: ಶಿವಮೊಗ್ಗ ಮಹಾ ನಗರಪಾಲಿಕೆ ಪ್ರಕಟಣೆ

Date:

ಶಿವಮೊಗ್ಗ ಮಹಾನಗರ ಪಾಲಿಕೆಯು 2026-27ನೇ ಸಾಲಿನ ಎಸ್.ಎಫ್.ಸಿ ನಿಧಿಯ ಯೋಜನೆಯಡಿ ಪರಿಶಿಷ್ಟಜಾತಿ / ಪರಿಶಿಷ್ಟ ಪಂಗಡ ವಿಶೇಷಚೇತನ ಮತ್ತು ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ.

ಬಿ.ಇ /ಎಂ.ಬಿ. ಬಿ.ಎಸ್. ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗಾಗಿ ರೂ.50000/- ಸಹಾಯಧನ ನೀಡಲಾಗುತ್ತಿದ್ದು, ಆದಾಯ ರೂ.5 ಲಕ್ಷ ಮಿತಿಯಲ್ಲಿರಬೇಕು.

ಬಿ.ಇ /ಎಂ.ಬಿ. ಬಿ.ಎಸ್. ವ್ಯಾಸಾಂಗ ಮಾಡುತ್ತಿರುವ ಇತರೆ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗಾಗಿ ರೂ.50000/- ಸಹಾಯಧನ ನೀಡಲಾಗುತ್ತಿದ್ದು, ಆದಾಯ ರೂ. 2.50 ಲಕ್ಷ ಮಿತಿಯಲ್ಲಿರಬೇಕು. ವಿಶೇಷ ಚೇತನರಿಗೆ ಸಣ್ಣ ಉದ್ದಿಮೆಗೆ ಸಹಾಯಧನ ನೀಡಲಾಗುತ್ತಿದ್ದು, ಅವರ ಆದಾಯ ರೂ. 3.00 ಲಕ್ಷ ಮಿತಿಯಲ್ಲಿರಬೇಕು.

ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಪತ್ರ, ಪಡಿತರಚೀಟಿ ಆಧಾರ ಕಾರ್ಡ್, ವ್ಯಾಸಾಂಗ ದೃಢೀಕರಣ ಪತ್ರ, ವಿಶೇಷ ಚೇತನರ UDID ಕಾರ್ಡ್, ಸಣ್ಣ ಉದ್ದಿಮೆ ಫಲಾಭವಿಗಳು ಯೋಜನಾ ವರದಿ ಲಗತ್ತಿಸುವುದು. ಈ ಎಲ್ಲಾ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ನೀಡುವುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.shivamoggacity.mrc.gov.in, ದೂ. ಸಂ.: 08182-277677/226606 ಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪ್ರತೀ ಮನೆಯ ಮುಂದೆ ಸಸಿ ನೆಡುವ ಅಪೂರ್ವ ಸಂಕಲ್ಪ, ನಿವಾಸಿಗಳ ಪ್ರಯತ್ನ ಶ್ಲಾಘನೀಯ- ಬಿ.ವೈ.ರಾಘವೇಂದ್ರ

B.Y. Raghavendra ಹಸಿರು ಶಿವಮೊಗ್ಗ ಮತ್ತು ಸುಸ್ಥಿರ ಪರಿಸರದ ಆಶಯದೊಂದಿಗೆ, ಪಶು...

Bharat Scouts and Guides ಮಕ್ಕಳ ಆಸಕ್ತಿಗೆ ಅನುಗುಣ ಅವರ ಕಲಿಕೆಯನ್ನ ಪ್ರೋತ್ಸಾಹಿಸಬೇಕು- ಶಕುಂತಲಾ ಚಂದ್ರಶೇಖರ್

Bharat Scouts and Guides ಮಕ್ಕಳ ಆಸಕ್ತಿಗನುಗುಣವಾಗಿ ಅವರ ಕಲಿಕೆಯನ್ನು ಉತ್ತಮ...

Rotary Shimoga ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ನಿರ್ಲಕ್ಷ್ಯ – ಎಂ.ಎನ್.ಸುಂದರ ರಾಜ್

Rotary Shimoga ನಾಡಿನ ಆದಾಯದ ಮೂಲ ಆಗಬೇಕಿದ್ದ ಪ್ರವಾಸೋದ್ಯಮ ನಿರ್ಲಕ್ಷ್ಯಕ್ಕೆ...

World Environment Day ಶಿವಮೊಗ್ಗದಲ್ಲಿ ಗಮನ ಸೆಳೆದ ವಿಶಿಷ್ಟ ರೀತಿಯ “ಪರಿಸರ ದಿನಾಚರಣೆ”

ದಿನಾಂಕ ೦೫.೦೬.೨೦೨೬ ರಂದು ಶುಕ್ರವಾರ ಬೆಳಿಗ್ಗೆ ೮ ಗಂಟೆಗೆ ಶಿವಮೊಗ್ಗರಾಜೇಂದ್ರನಗರ ಬಡಾವಣೆಯ...