Monday, July 27, 2026
Monday, July 27, 2026

Rotary Shimoga ರೋಟರಿ ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾನಿರತ- ಕಿಶೋರ್ ಕುಮಾರ್

Date:

Rotary Shimoga ರೋಟರಿ ಸದಸ್ಯರು ಜನ್ಮದಿನದಂದು ವಿಶೇಷ ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸಿ ಸೇವಾ ಕಾರ್ಯ ನಡೆಸುವುದು ಶ್ಲಾಘನೀಯ ಸಂಗತಿ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್‌ಕುಮಾರ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಿ ಮಾತನಾಡಿ, ರೋಟರಿ ಸಂಸ್ಥೆಯು ನಿರಂತರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದು, ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

75ನೇ ವರ್ಷದ ಜನ್ಮದಿನ ಆಚರಿಸಿಕೊಂಡ ರೋಟರಿ ಶಿವಮೊಗ್ಗ ಪೂರ್ವ ಸದಸ್ಯ ಡಾ. ಪರಮೇಶ್ವರ್ ಶಿಗ್ಗಾವ್ ಮಾತನಾಡಿ, ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಪೂರಕವಾದ ವಾತಾವರಣ ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ. ಚೆನ್ನಾಗಿ ಅಧ್ಯಯನ ಮಾಡುವ ಜೊತೆಯಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಶುಭಕೋರಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ಮಾತನಾಡಿ, ರೋಟರಿ ಸದಸ್ಯರು ವಿಶೇಷ ಸಂರ್ದರ್ಭಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ನಡೆಸುವುದು ಮತ್ತಷ್ಟು ಸಂತೋಷವನ್ನು ಹೆಚ್ಚಿಸುತ್ತದೆ. ಎಲ್ಲ ಸದಸ್ಯರು ಜನ್ಮದಿನ ಸೇರಿದಂತೆ ಜೀವನ ವಿಶೇಷ ದಿನಗಳನ್ನು ಸೇವಾ ಕಾರ್ಯಗಳೊಂದಿಗೆ ಆಚರಿಸಬೇಕು ಎಂದು ಹೇಳಿದರು.

Rotary Shimoga ಮುಖ್ಯಶಿಕ್ಷಕ ನಾಗರಾಜಪ್ಪ ಮಾತನಾಡಿ, ಶಾಲಾ ಮಕ್ಕಳಿಗೆ ಅಗತ್ಯವಿರುವ ನೋಟ್‌ಬುಕ್, ಲೇಖನ ಸಾಮಾಗ್ರಿ ಇನ್ನಿತರ ವಸ್ತುಗಳನ್ನು ನೀಡುವುದರಿಂದ ಕಲಿಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ವಿಶ್ವ ಪರಿಸರ ದಿನದ ಹಿನ್ನೆಲೆಯಲ್ಲಿ ಸಸಿ ನೆಡುವುದರ ಜತೆ ವನಮಹೋತ್ಸವ ಆಚರಿಸಲಾಯಿತು. ಉಷಾ ಪರಮೇಶ್ವರ್ ಶಿಗ್ಗಾವ್, ಮೀನಾಕ್ಷಿ, ದೇವೆಂದ್ರಪ್ಪ, ಆರತಿ, ಶಿಕ್ಷಕಿಯರು, ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...